July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರ ಉದ್ಘಾಟನೆ

ಶಿಶಿಲ : ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲ ವೈಕುಂಠಪುರ, ಶಿಶಿಲ ಮತ್ತು ಗ್ರಾಮ ಪಂಚಾಯತ್ ಶಿಶಿಲ ಇವುಗಳ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರವು ಶಿಶಿಲ ವೈಕುಂಠಪುರ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲ ಕಟ್ಟಡದಲ್ಲಿ ಅ.22 ರಂದು ಉದ್ಘಾಟನೆಗೊಂಡಿತು.

ಶಿಶಿಲ ಟೈಲರಿಂಗ್‌ ತರಬೇತುದಾರರಾದ ಶ್ರೀಮತಿ ವಿನಯ ಶೆಂಡ್ಯ, ಬಂಡಿಹೊಳೆ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಸೇವಾ ಭಾರತಿ ಕನ್ಯಾಡಿ ಇದರ ಟ್ರಸ್ಟಿ ಕೃಷ್ಣಪ್ಪ ಗುಡಿಗಾರ್ ವಹಿಸಿದರು.

ಮುಖ್ಯ ಅತಿಥಿಗಳಾಗಿ ಶಿಶಿಲ ವೈಕುಂಠಪುರ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಅಧ್ಯಕ್ಷ ಹರೀಶ್ ಕೊಳಂಬೆ ಆಗಮಿಸಿದ್ದರು.

ಅಂಗನವಾಡಿ ಕಾರ್ಯಕರ್ತೆ ಯಶೋಧ ಸ್ವಾಗತಿಸಿದರು. ಸೇವಾ ಭಾರತಿಯ ಸುಮಾ ಕಾರ್ಯಕ್ರಮ ನಿರೂಪಿಸಿ, ಚಂದನ್ ಗುಡಿಗಾರ್ ಧನ್ಯವಾದವಿತ್ತರು.

Related posts

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

Suddi Udaya

ಬೆಳ್ತಂಗಡಿ: ವಿದ್ಯಾರ್ಥಿಯ ದತ್ತು ಸ್ವೀಕಾರ, ದೀಪಕ್ ಹೆಚ್.ಡಿ ಯವರಿಗೆ ಸನ್ಮಾನ

Suddi Udaya

ಮಲೆಕುಡಿಯ ಕಾಲನಿ ರಸ್ತೆಯ ಅವ್ಯವಸ್ಥೆಗೆ ತೀವ್ರ ಆಕ್ರೋಶ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಚುನಾವಣಾ ಬಹಿಷ್ಕಾರದ ಕೂಗು…

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಬಿ. ಸೋಮಶೇಖರ ಶೆಟ್ಟಿ ರವರಿಗೆ ಸ್ನೇಹ ಕೂಟ ಕಾರ್ಯಕ್ರಮ

Suddi Udaya
error: Content is protected !!