30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರ ಉದ್ಘಾಟನೆ

ಶಿಶಿಲ : ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲ ವೈಕುಂಠಪುರ, ಶಿಶಿಲ ಮತ್ತು ಗ್ರಾಮ ಪಂಚಾಯತ್ ಶಿಶಿಲ ಇವುಗಳ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರವು ಶಿಶಿಲ ವೈಕುಂಠಪುರ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲ ಕಟ್ಟಡದಲ್ಲಿ ಅ.22 ರಂದು ಉದ್ಘಾಟನೆಗೊಂಡಿತು.

ಶಿಶಿಲ ಟೈಲರಿಂಗ್‌ ತರಬೇತುದಾರರಾದ ಶ್ರೀಮತಿ ವಿನಯ ಶೆಂಡ್ಯ, ಬಂಡಿಹೊಳೆ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಸೇವಾ ಭಾರತಿ ಕನ್ಯಾಡಿ ಇದರ ಟ್ರಸ್ಟಿ ಕೃಷ್ಣಪ್ಪ ಗುಡಿಗಾರ್ ವಹಿಸಿದರು.

ಮುಖ್ಯ ಅತಿಥಿಗಳಾಗಿ ಶಿಶಿಲ ವೈಕುಂಠಪುರ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಅಧ್ಯಕ್ಷ ಹರೀಶ್ ಕೊಳಂಬೆ ಆಗಮಿಸಿದ್ದರು.

ಅಂಗನವಾಡಿ ಕಾರ್ಯಕರ್ತೆ ಯಶೋಧ ಸ್ವಾಗತಿಸಿದರು. ಸೇವಾ ಭಾರತಿಯ ಸುಮಾ ಕಾರ್ಯಕ್ರಮ ನಿರೂಪಿಸಿ, ಚಂದನ್ ಗುಡಿಗಾರ್ ಧನ್ಯವಾದವಿತ್ತರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್.ಇ) ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಇಳಂತಿಲ ಗ್ರಾಮದ ಕಟ್ಟೆಚಾರು ನಿವಾಸಿ ಕುಶಾಲಪ್ಪ ಗೌಡ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ: ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

Suddi Udaya

ಜೀವ ಬೆದರಿಕೆ ಆರೋಪ : ಕೆ.ಎನ್ ಗೌಡರಿಂದ ಠಾಣೆಗೆ ದೂರು

Suddi Udaya

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಉಪನ್ಯಾಸಮಾಲೆ-5 ಕಾರ್ಯಕ್ರಮ

Suddi Udaya
error: Content is protected !!