22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

ಮಲವಂತಿಗೆ: ಇಲ್ಲಿಯ ಮಲ್ಲ, ನಂದಿಕಾಡು, ಆರ್ನಂದಿಕಾಡು ಪರಿಸರದಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳು ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ಕೃಷಿಯನ್ನು ನಾಶಪಡಿಸಿದೆ. ಸದಾಶಿವ ಮಲೆಕುಡಿಯ ತೋಟದಲ್ಲಿ ಸುಮಾರು ೧೫೦ ಅಡಿಕೆ ಮರ, ತೆಂಗಿನ ಮರಗಳು ಹಾಗೂ ಇತರ ಮರಗಳನ್ನೂ ನೆಲಕ್ಕೆ ಉರುಳಿಸಿದೆ. ಇವರಿಗೆ ಸೇರಿದ ಒಂದುವರೆ ಎಕ್ರೆ ಗದ್ದೆಯಲ್ಲಿನ ಭತ್ತದ ಕೃಷಿಯನ್ನು ಸಂಪೂರ್ಣ ನಾಶಪಡಿಸಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಮನೆಗಳ ಸಮೀಪದಲ್ಲಯೇ ಕಾಡಾನೆಗಳು ಓಡಾಟ ನಡೆಸಿದ್ದು ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಆರಕ್ಕೂ ಹೆಚ್ಚು ಆನೆಗಳು ತಂಡದಲ್ಲಿದ್ದು, ಇದೇ ಪರಿಸರದ ಅರಣ್ಯದಲ್ಲಿ ಬೀಡು ಬಿಟ್ಟಿರುವ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ ಹಿಂದೆ ಆರಕ್ಕೂ ಹೆಚ್ಚು ಆನೆಗಳಿದ್ದ ಹಿಂಡೊಂದು ಚಾರ್ಮಾಡಿಯಲ್ಲಿ ಕೃಷಿಗೆ ಹಾನಿಯುಂಟು ಮಾಡಿತ್ತು ಇದೇ ಆನೆಗಳು ಇದೀಗ ಮಲವಂತಿಗೆ ಪ್ರದೇಶಕ್ಕೆ ಬಂದಿರಬಹುದು ಎಂದು ಅನುಮಾನಿಸಲಾಗಿದೆ.

Related posts

ಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರು

Suddi Udaya

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಬೆಳ್ತಂಗಡಿ ಹುಂಡೈ ಶೋ ರೂಮ್ ನಲ್ಲಿ ನ್ಯೂ ಕ್ರೆಟಾ ಫೇಸ್ ಲಿಫ್ಟ್ ಕಾರು ಮಾರುಕಟ್ಟೆಗೆ ಬಿಡುಗಡೆ

Suddi Udaya

ಉಜಿರೆ: ವಿಲ್ಸನ್ ಸಂತೋಷ್ ರೊಡ್ರಿಗಸ್ ಹೃದಯಾಘಾತದಿಂದ ನಿಧನ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya
error: Content is protected !!