23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

ಮಲವಂತಿಗೆ: ಇಲ್ಲಿಯ ಮಲ್ಲ, ನಂದಿಕಾಡು, ಆರ್ನಂದಿಕಾಡು ಪರಿಸರದಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳು ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ಕೃಷಿಯನ್ನು ನಾಶಪಡಿಸಿದೆ. ಸದಾಶಿವ ಮಲೆಕುಡಿಯ ತೋಟದಲ್ಲಿ ಸುಮಾರು ೧೫೦ ಅಡಿಕೆ ಮರ, ತೆಂಗಿನ ಮರಗಳು ಹಾಗೂ ಇತರ ಮರಗಳನ್ನೂ ನೆಲಕ್ಕೆ ಉರುಳಿಸಿದೆ. ಇವರಿಗೆ ಸೇರಿದ ಒಂದುವರೆ ಎಕ್ರೆ ಗದ್ದೆಯಲ್ಲಿನ ಭತ್ತದ ಕೃಷಿಯನ್ನು ಸಂಪೂರ್ಣ ನಾಶಪಡಿಸಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಮನೆಗಳ ಸಮೀಪದಲ್ಲಯೇ ಕಾಡಾನೆಗಳು ಓಡಾಟ ನಡೆಸಿದ್ದು ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಆರಕ್ಕೂ ಹೆಚ್ಚು ಆನೆಗಳು ತಂಡದಲ್ಲಿದ್ದು, ಇದೇ ಪರಿಸರದ ಅರಣ್ಯದಲ್ಲಿ ಬೀಡು ಬಿಟ್ಟಿರುವ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ ಹಿಂದೆ ಆರಕ್ಕೂ ಹೆಚ್ಚು ಆನೆಗಳಿದ್ದ ಹಿಂಡೊಂದು ಚಾರ್ಮಾಡಿಯಲ್ಲಿ ಕೃಷಿಗೆ ಹಾನಿಯುಂಟು ಮಾಡಿತ್ತು ಇದೇ ಆನೆಗಳು ಇದೀಗ ಮಲವಂತಿಗೆ ಪ್ರದೇಶಕ್ಕೆ ಬಂದಿರಬಹುದು ಎಂದು ಅನುಮಾನಿಸಲಾಗಿದೆ.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ

Suddi Udaya

ಮೇ 16: ಎಮ್.ಆರ್.ಪಿ.ಎಲ್ ಹಾಗೂ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಇವರ ಆಶ್ರಯದಲ್ಲಿ ” ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಪುಸ್ತಕ ವಿತರಣೆ

Suddi Udaya

ಶ್ರೀ ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ ಆರಂಭ182 ಮಂದಿ ಶಿಬಿರಾರ್ಥಿಗಳು ಭಾಗಿ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ನೇತೃತ್ವದಲ್ಲಿ ಮುಖ್ಯ ಮಂತ್ರಿ ಪದಕ ವಿಜೇತ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ರವರಿಗೆ ಸನ್ಮಾನ

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya
error: Content is protected !!