September 6, 2026
Uncategorized

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

ಮಲವಂತಿಗೆ: ಇಲ್ಲಿಯ ಮಲ್ಲ, ನಂದಿಕಾಡು, ಆರ್ನಂದಿಕಾಡು ಪರಿಸರದಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳು ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ಕೃಷಿಯನ್ನು ನಾಶಪಡಿಸಿದೆ. ಸದಾಶಿವ ಮಲೆಕುಡಿಯ ತೋಟದಲ್ಲಿ ಸುಮಾರು ೧೫೦ ಅಡಿಕೆ ಮರ, ತೆಂಗಿನ ಮರಗಳು ಹಾಗೂ ಇತರ ಮರಗಳನ್ನೂ ನೆಲಕ್ಕೆ ಉರುಳಿಸಿದೆ. ಇವರಿಗೆ ಸೇರಿದ ಒಂದುವರೆ ಎಕ್ರೆ ಗದ್ದೆಯಲ್ಲಿನ ಭತ್ತದ ಕೃಷಿಯನ್ನು ಸಂಪೂರ್ಣ ನಾಶಪಡಿಸಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಮನೆಗಳ ಸಮೀಪದಲ್ಲಯೇ ಕಾಡಾನೆಗಳು ಓಡಾಟ ನಡೆಸಿದ್ದು ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಆರಕ್ಕೂ ಹೆಚ್ಚು ಆನೆಗಳು ತಂಡದಲ್ಲಿದ್ದು, ಇದೇ ಪರಿಸರದ ಅರಣ್ಯದಲ್ಲಿ ಬೀಡು ಬಿಟ್ಟಿರುವ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ ಹಿಂದೆ ಆರಕ್ಕೂ ಹೆಚ್ಚು ಆನೆಗಳಿದ್ದ ಹಿಂಡೊಂದು ಚಾರ್ಮಾಡಿಯಲ್ಲಿ ಕೃಷಿಗೆ ಹಾನಿಯುಂಟು ಮಾಡಿತ್ತು ಇದೇ ಆನೆಗಳು ಇದೀಗ ಮಲವಂತಿಗೆ ಪ್ರದೇಶಕ್ಕೆ ಬಂದಿರಬಹುದು ಎಂದು ಅನುಮಾನಿಸಲಾಗಿದೆ.

Related posts

ಸುದ್ದಿ ಉದಯ ಫಲಶ್ರುತಿ: ಬಂದಾರು ಬೋಲೋಡಿ ಎಂಬಲ್ಲಿ ಗುಡ್ಡ ಕುಸಿತ ವರದಿ ಬೆನ್ನಲ್ಲೇ ಗ್ರಾ.ಪಂ. ನಿಂದ ತಕ್ಷಣ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಹಾಸಭೆ: ಇಂಜಿನಿಯರ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಸುಬ್ರಹ್ಮಣ್ಯ: ಕುಮಾರಧಾರ – ಕುಲ್ಕುಂದ ಕಾಲೋನಿ ರಸ್ತೆ ಬದಿ ಸಮಾಜಸೇವಕ ರವಿ ಪೂಜಾರಿ ಕಕ್ಕೆಪದವು ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ-ಎಲ್ಲಿ ಸ್ವಚ್ಛತೆ ಇದೆಯೋ ಅಲ್ಲಿ ದೇವರ ಸಾನಿಧ್ಯ ಇದೆ: ರಾಜಶೇಖರ ಕೋಟ್ಯಾನ್

Suddi Udaya

ಫೇಸ್‌ಬುಕ್ ಖಾತೆಯಲ್ಲಿ ಪೊಸ್ಟ್ ಹಾಕಿ ಮಾನಹಾನಿ ಆರೋಪ:ಯುವತಿ ದೂರು: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

86 ಸೀಮ್ ಕಾರ್ಡ್ ಸಹಿತ ಬೆಳ್ತಂಗಡಿ ಯ ಇಬ್ಬರನ್ನು ಬಂಧಿಸಿದ ಮಂಗಳೂರು ಪೊಲೀಸರು: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪ

Suddi Udaya
error: Content is protected !!