July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯುಗಾದಿ ನವ ಪಲ್ಲವಕೆ ನಾಂದಿ – ಸ್ನೇಹ ಕೂಟ ಕಾರ್ಯಕ್ರಮ

ಧರ್ಮಸ್ಥಳ: ಫೇಸ್ಬುಕ್ ಮುಖಪುಟದ ಹೆಸರಾಂತ ಸಾಹಿತ್ಯ ಬಳಗಗಳಲ್ಲಿ ಒಂದಾದ ಯುಗಾದಿ ಬಳಗದ ಸ್ನೇಹ ಪರ್ವ ಕಾರ್ಯಕ್ರಮ
ಅ. 20 ರಂದು ಧರ್ಮಸ್ಥಳದ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳದ ಶ್ರೀಮತಿ ಶ್ಯಾಮಲಾ ಗೋಪಿನಾಥ್ ವಹಿಸಿಕೊಂಡಿದ್ದು, ಉದ್ಘಾಟನೆಯನ್ನು ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕದ ವಿಜಯಕುಮಾರ್ ಜೈನ್, ಅಳದಂಗಡಿ ನೆರವೇರಿಸಿದ್ದರು.

ಮುಖ್ಯ ಅತಿಥಿಗಳಾಗಿ ಪುಣೆಯ ಶರಣಬಸಪ್ಪ ಕುಂಬಾರ್, ಬೆಂಗಳೂರಿನ ಶ್ರೀಮತಿ ಕಲಾವತಿ ಪ್ರಕಾಶ್ ಹಾಗೂ ಅರಸೀಕೆರೆಯ ಹೆಚ್. ಡಿ ದಿವಾಕರ್ ಆಗಮಿಸಿದ್ದರು. ಬೆಂಗಳೂರಿನ ಪಿ. ಎಸ್ ಭಟ್ ಹಾಗೂ ಧರ್ಮಸ್ಥಳದ ಬಿ. ಭುಜಬಲಿಯವರ ಗೌರವ ಉಪಸ್ಥಿತಿಯಲ್ಲಿ ಹಾಗೂ ಯುಗಾದಿ ಬಳಗದ ಸಂಸ್ಥಾಪಕರಾದ ಶ್ರೀನಾಗ್. ಪಿ. ಎಸ್ ಅವರ ಸಾರಥ್ಯದಲ್ಲಿ ಯಶಸ್ವಿಯಾಗಿ ನಡೆಯಿತು.

ಈ ಸಂದರ್ಭದಲ್ಲಿ ಬಳಗದ ಮೂವರು ವ್ಯವಸ್ಥಾಪಕಿಯರ ಕೃತಿ ಬಿಡುಗಡೆ ನಡೆಯಿತು.
ಕಾಸರಗೋಡಿನ ಸೌಮ್ಯ ಗುರು ಕಾರ್ಲೆಯವರ ಹೇಮಾಕ್ಷರಿ, ಬೆಂಗಳೂರಿನ ಶ್ರೀಲತಾ ಭಾರ್ಗವ್ ಅವರ ಸೇವಂತಿಗೆ ಹಾಗೂ ತುಮಕೂರಿನ ಮೀನಾ ನಾಗರಾಜ್ ಅವರ ಭಾವದಿಂಚರ ಕೃತಿಗಳು ಲೋಕಾರ್ಪಣೆಗೊಂಡವು.

ಕೊಡಗಿನ ವೀಣಾ ಉಮೇಶ್ ಪ್ರಾರ್ಥನೆ ಹಾಡಿದರು. ಬೆಂಗಳೂರಿನ ಸುಜಾತಾ ಭಟ್ ಸ್ವಾಗತಿಸಿದರು. ಹೊನ್ನಾವರದ ಶ್ರೀನಾಗ್ ಪಿ. ಎಸ್ ಪ್ರಸ್ತಾವಿಕ ಭಾಷಣ ಮಾಡಿದರು. ಬೆಳ್ತಂಗಡಿಯ ಆಶಾ ಅಡೂರ್, ಶ್ರೀಲತಾ ಭಾರ್ಗವ್ ಹಾಗೂ ಬೆಂಗಳೂರಿನ ದರ್ಶಿನಿ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಮೀನಾ ನಾಗರಾಜ್ ವಂದಿಸಿದರು.


ಕಾರ್ಯಕ್ರಮದ ನಿಮಿತ್ತ ಕವಿಗೋಷ್ಠಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಮುಂಬೈ, ಪುಣೆಯಿಂದ 21 ಕವಿಗಳು ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯದ ವಿವಿಧ ಕಡೆಯಿಂದ ಯುಗಾದಿ ಬಳಗದ ಸದಸ್ಯರು ಆಗಮಿಸಿ ಸ್ನೇಹಪರ್ವ ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು.

Related posts

ನೆಲ್ಯಾಡಿಯಲ್ಲಿ ಉದನೆ ವಲಯ ಮಟ್ಟದ ಮಾತೃಸಂಗಮ ‘ಫಿದೆಲಿಯುಂ–2026’

Suddi Udaya

ಬೆಳ್ತಂಗಡಿ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ತರಬೇತಿ ಶಿಬಿರದ ಉದ್ಘಾಟನೆ

Suddi Udaya

4ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ವನಮಹೋತ್ಸವ

Suddi Udaya

ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

Suddi Udaya

ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

Suddi Udaya
error: Content is protected !!