July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆ

ಪುತ್ತೂರು : ವಿದ್ಯಾಮಾತಾ ಅಕಾಡೆಮಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಗೆ ಪೂರ್ವ ತಯಾರಿ ತರಬೇತಿಯನ್ನು ಪಡೆದಕೊಂಡ ಬಸವರಾಜ್ ಇವರು ಕರ್ನಾಟಕ ರಾಜ್ಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಯ ನೇಮಕಾತಿ ಪ್ರಕ್ರಿಯೆಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗಿ ಇದೀಗ ನೇಮಕಾತಿಗೊಂಡಿರುತ್ತಾರೆ.


ಮೂಲತಃ ಬೆಳಗಾವಿ ಜಿಲ್ಲೆಯ ಕಾಗವಡ ತಾಲೂಕಿನ ಕಾತ್ರಾಳ್ ಗ್ರಾಮದ ನಿವಾಸಿಗಳಾದ ಶಂಕರ ಮತ್ತು ಯಮುನವ್ವ ದಂಪತಿಯ ಪುತ್ರ ಬಸವರಾಜ ಮುದವಿ ರವರು ಪ್ರಸ್ತುತ ಸುಳ್ಯ ಆರಕ್ಷಕ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಮುದವಿಯವರು ಈ ಹಿಂದೆ ಬೆಳ್ಳಾರೆ ಆರಕ್ಷಕ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿದ್ದುಕೊಂಡು ಉನ್ನತ ಸ್ಥಾನಕ್ಕೇರಲು ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಕರ್ತವ್ಯದ ಒತ್ತಡದ ನಡುವೆಯೂ ಅಭ್ಯಾಸ ನಡೆಸಿ ಕಡೆಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆಗೊಂಡು ವಿದ್ಯಾಮಾತಾ ಅಕಾಡೆಮಿಯ ಕೀರ್ತಿಯನ್ನು ಉನ್ನತ ಸ್ಥಾನಕ್ಕೇರಿಸಿದ್ದಾರೆ, ಬಸವರಾಜ ಮುದವಿಯವರ ಈ ಸಾಧನೆಗೆ ಪ್ರಸ್ತುತ ಪುತ್ತೂರು ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಗಿರುವ ಆಂಜನೇಯ ರೆಡ್ಡಿಯವರ ಮಾರ್ಗದರ್ಶನ ಸ್ಮರಣಿಯವಾಗಿದ್ದು, ಹೆತ್ತವರಿಗೂ ಊರಿಗೂ ಇವರ ಅವಿಸ್ಮರಣೀಯವಾದ ಯಶಸ್ಸು ಗೌರವವನ್ನು ತಂದಿದ್ದು ಇನ್ನಷ್ಟು ಆಕಾಂಕ್ಷಿಗಳಿಗೆ ದಾರಿದೀಪವಾಗಿರುವ ವಿದ್ಯಾಮಾತಾ ಅಕಾಡೆಮಿಯ ಮುಂದಿನ ತರಬೇತಿಗಳಿಗೆ ಇನ್ನಷ್ಟು ಬಲ ಬಂದಿದೆ.

Related posts

ಸ್ಫೋಟ ಪ್ರಕರಣ: ಧರ್ಮಸ್ಥಳ ಪೊಲೀಸರು ಮತ್ತು ಸೋಕೋ ತಂಡದಿಂದ ಸ್ಥಳ ಮಹಜರು

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ನೂತನ ಬಾವಿ ನಿರ್ಮಾಣಕ್ಕೆ ಮುಹೂರ್ತ

Suddi Udaya

ಲಾಯಿಲ: ಕುಂಟಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸ ನೂತನ ಕಟ್ಟಡ ಉದ್ಘಾಟನೆ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌಢ ಶಾಲೆಯಲ್ಲಿ ಆಟಿದ ಲೇಸು ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಕಾನರ್ಪ ಬೆಳ್ಳೂರು ಬೈಲು ಬೇಬಿಯವರ ಮನೆಯ ಗೋಡೆ ಕುಸಿತ

Suddi Udaya
error: Content is protected !!