September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆ

ಪುತ್ತೂರು : ವಿದ್ಯಾಮಾತಾ ಅಕಾಡೆಮಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಗೆ ಪೂರ್ವ ತಯಾರಿ ತರಬೇತಿಯನ್ನು ಪಡೆದಕೊಂಡ ಬಸವರಾಜ್ ಇವರು ಕರ್ನಾಟಕ ರಾಜ್ಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಯ ನೇಮಕಾತಿ ಪ್ರಕ್ರಿಯೆಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗಿ ಇದೀಗ ನೇಮಕಾತಿಗೊಂಡಿರುತ್ತಾರೆ.


ಮೂಲತಃ ಬೆಳಗಾವಿ ಜಿಲ್ಲೆಯ ಕಾಗವಡ ತಾಲೂಕಿನ ಕಾತ್ರಾಳ್ ಗ್ರಾಮದ ನಿವಾಸಿಗಳಾದ ಶಂಕರ ಮತ್ತು ಯಮುನವ್ವ ದಂಪತಿಯ ಪುತ್ರ ಬಸವರಾಜ ಮುದವಿ ರವರು ಪ್ರಸ್ತುತ ಸುಳ್ಯ ಆರಕ್ಷಕ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಮುದವಿಯವರು ಈ ಹಿಂದೆ ಬೆಳ್ಳಾರೆ ಆರಕ್ಷಕ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿದ್ದುಕೊಂಡು ಉನ್ನತ ಸ್ಥಾನಕ್ಕೇರಲು ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಕರ್ತವ್ಯದ ಒತ್ತಡದ ನಡುವೆಯೂ ಅಭ್ಯಾಸ ನಡೆಸಿ ಕಡೆಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆಗೊಂಡು ವಿದ್ಯಾಮಾತಾ ಅಕಾಡೆಮಿಯ ಕೀರ್ತಿಯನ್ನು ಉನ್ನತ ಸ್ಥಾನಕ್ಕೇರಿಸಿದ್ದಾರೆ, ಬಸವರಾಜ ಮುದವಿಯವರ ಈ ಸಾಧನೆಗೆ ಪ್ರಸ್ತುತ ಪುತ್ತೂರು ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಗಿರುವ ಆಂಜನೇಯ ರೆಡ್ಡಿಯವರ ಮಾರ್ಗದರ್ಶನ ಸ್ಮರಣಿಯವಾಗಿದ್ದು, ಹೆತ್ತವರಿಗೂ ಊರಿಗೂ ಇವರ ಅವಿಸ್ಮರಣೀಯವಾದ ಯಶಸ್ಸು ಗೌರವವನ್ನು ತಂದಿದ್ದು ಇನ್ನಷ್ಟು ಆಕಾಂಕ್ಷಿಗಳಿಗೆ ದಾರಿದೀಪವಾಗಿರುವ ವಿದ್ಯಾಮಾತಾ ಅಕಾಡೆಮಿಯ ಮುಂದಿನ ತರಬೇತಿಗಳಿಗೆ ಇನ್ನಷ್ಟು ಬಲ ಬಂದಿದೆ.

Related posts

ಸುಲ್ಕೇರಿ ಹಿಂದೂರುದ್ರ ಭೂಮಿಗೆ ಶ್ರೀಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಿಲಿಕಾನ್ ಚೆಂಬರ್ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಎಸ್.ಡಿ.ಎಂ. ವಸತಿ ಪ.ಪೂ. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಕವಿತಾ ಉಮೇಶ್ ರವರಿಗೆ ‘ಕನ್ನಡ ಸ್ವಾಭಿಮಾನ ಸ್ಮರಣಿಕೆಯ ಗೌರವ ಪ್ರಶಸ್ತಿ’

Suddi Udaya

ಬಂದಾರು-ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ತ್ಯಾಜ್ಯ ಮುಕ್ತ ಭಾರತ ಸ್ವಚ್ಛತೆಯೇ ಸೇವೆ. ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಧರ್ಮಸ್ಥಳದ ನೇತ್ರಾವತಿ ನದಿ ಸ್ಥಾನಘಟ್ಟದಲ್ಲಿ ಚಾಲನೆ

Suddi Udaya

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ದಿನಾಚರಣೆ

Suddi Udaya

ಮಚ್ಚಿನ ಶ್ರೀ ವಿದ್ಯಾಸಾಗರ ಶಾಲೆಯಲ್ಲಿ ಮಕ್ಕಳ ಆಹಾರ ಮೇಳ

Suddi Udaya
error: Content is protected !!