25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆ

ಪುತ್ತೂರು : ವಿದ್ಯಾಮಾತಾ ಅಕಾಡೆಮಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಗೆ ಪೂರ್ವ ತಯಾರಿ ತರಬೇತಿಯನ್ನು ಪಡೆದಕೊಂಡ ಬಸವರಾಜ್ ಇವರು ಕರ್ನಾಟಕ ರಾಜ್ಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಯ ನೇಮಕಾತಿ ಪ್ರಕ್ರಿಯೆಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗಿ ಇದೀಗ ನೇಮಕಾತಿಗೊಂಡಿರುತ್ತಾರೆ.


ಮೂಲತಃ ಬೆಳಗಾವಿ ಜಿಲ್ಲೆಯ ಕಾಗವಡ ತಾಲೂಕಿನ ಕಾತ್ರಾಳ್ ಗ್ರಾಮದ ನಿವಾಸಿಗಳಾದ ಶಂಕರ ಮತ್ತು ಯಮುನವ್ವ ದಂಪತಿಯ ಪುತ್ರ ಬಸವರಾಜ ಮುದವಿ ರವರು ಪ್ರಸ್ತುತ ಸುಳ್ಯ ಆರಕ್ಷಕ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಮುದವಿಯವರು ಈ ಹಿಂದೆ ಬೆಳ್ಳಾರೆ ಆರಕ್ಷಕ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿದ್ದುಕೊಂಡು ಉನ್ನತ ಸ್ಥಾನಕ್ಕೇರಲು ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಕರ್ತವ್ಯದ ಒತ್ತಡದ ನಡುವೆಯೂ ಅಭ್ಯಾಸ ನಡೆಸಿ ಕಡೆಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆಗೊಂಡು ವಿದ್ಯಾಮಾತಾ ಅಕಾಡೆಮಿಯ ಕೀರ್ತಿಯನ್ನು ಉನ್ನತ ಸ್ಥಾನಕ್ಕೇರಿಸಿದ್ದಾರೆ, ಬಸವರಾಜ ಮುದವಿಯವರ ಈ ಸಾಧನೆಗೆ ಪ್ರಸ್ತುತ ಪುತ್ತೂರು ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಗಿರುವ ಆಂಜನೇಯ ರೆಡ್ಡಿಯವರ ಮಾರ್ಗದರ್ಶನ ಸ್ಮರಣಿಯವಾಗಿದ್ದು, ಹೆತ್ತವರಿಗೂ ಊರಿಗೂ ಇವರ ಅವಿಸ್ಮರಣೀಯವಾದ ಯಶಸ್ಸು ಗೌರವವನ್ನು ತಂದಿದ್ದು ಇನ್ನಷ್ಟು ಆಕಾಂಕ್ಷಿಗಳಿಗೆ ದಾರಿದೀಪವಾಗಿರುವ ವಿದ್ಯಾಮಾತಾ ಅಕಾಡೆಮಿಯ ಮುಂದಿನ ತರಬೇತಿಗಳಿಗೆ ಇನ್ನಷ್ಟು ಬಲ ಬಂದಿದೆ.

Related posts

ಮಡಂತ್ಯಾರು ಜೇಸಿ ಸಪ್ತಾಹ ವಿಜಯ ಎಸ್.ಸಾಲಿಯಾನ್‌ರಿಗೆ ಉದ್ಯಮರತ್ನ ಪುರಸ್ಕಾರ”

Suddi Udaya

ಬೆಳ್ತಂಗಡಿ: ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ

Suddi Udaya

ಬಂದಾರು-ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆರಂಭ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದ ನಾಗಬನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya
error: Content is protected !!