July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು: ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ‘ಶಿಕ್ಷಣ ಭೀಷ್ಮ ಪ್ರಶಸ್ತಿ’ಯ ಗರಿ

ವೇಣೂರು: ನಿಟ್ಟಡೆ ಕುಂಭಶ್ರೀ ವಸತಿ ಶಾಲೆ ಮತ್ತು ಪದವಿಪೂರ್ವ ಕಾಲೇಜು ಗುರುಕುಲ ಮಾದರಿ ಶಿಕ್ಷಣಕ್ಕೆ 2024- 25 ರ ಬೆಳ್ತಂಗಡಿ ತಾಲೂಕಿನ ಉತ್ತಮ ಶಾಲೆ ಶಿಕ್ಷಣ ಬೀಷ್ಮಪ್ರಶಸ್ತಿ ಲಭಿಸಿದೆ.


ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ಗುರುಕುಲ ಮಾದರಿ ಶಿಕ್ಷಣಕ್ಕೆ ಆದ್ಯತೆಯನ್ನು ನೀಡಲಾಗುತ್ತಿದ್ದು, 1996 ರಲ್ಲಿ ಪ್ರಾರಂಭಗೊಂಡ ಕುಂಭಶ್ರೀ ವಸತಿ ಶಾಲೆಯಲ್ಲಿ ಅನುಭವಿ ಶಿಕ್ಷಕರು ಮತ್ತು ಉಪನ್ಯಾಸಕರಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಕುಂಭಶ್ರೀ ವಿದ್ಯಾ ಸಂಸ್ಥೆಯ ಶೈಕ್ಷಣಿಕ ಸಾಧನೆಗೆ ರಾಷ್ಟ್ರೀಯ ವಿದ್ಯಾ ಗೌರವ್ ಚಿನ್ನದ ಪದಕ ಪ್ರಶಸ್ತಿ, ಪ್ರಬುದ್ಧ ಭಾರತ, ಸ್ಟಾರ್ ಆಫ್ ಏಷ್ಯಾ ಪ್ರಶಸ್ತಿಗಳು ಲಭಿಸಿವೆ. ಇದೀಗ ಕುಂಭಶ್ರೀ ವಿದ್ಯಾ ಸಂಸ್ಥೆ ಇಡೀ ಕರ್ನಾಟಕ ರಾಜ್ಯದಲ್ಲಿ ಬೆಳ್ತಂಗಡಿ ತಾಲೂಕಿನ ಅತ್ಯುತ್ತಮ ಶಾಲೆ ಎಂದು ಗುರುತಿಸಲ್ಪಟ್ಟು ಶಿಕ್ಷಣಭೀಷ್ಮ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ. ಹೆಚ್ ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಂದ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ಕುಂಭಶ್ರೀ ವಿದ್ಯಾ ಸಂಸ್ಥೆಯು ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು ,ಎಸ್ ಎಸ್ ಎಲ್ ಸಿ ಯಲ್ಲಿ ಸತತ 11ನೇ ಬಾರಿ ಶೇ.100 ಫಲಿತಾಂಶ, ಪಿಯುಸಿಯಲ್ಲಿ ಮೂರನೇ ಬಾರಿ ನೂರು ಶೇಕಡ ಫಲಿತಾಂಶವನ್ನು ಪಡೆದುಕೊಂಡಿರುತ್ತದೆ .ಬರೀ ಶಿಕ್ಷಣಕ್ಕೆ ಮಾತ್ರ ಮಹತ್ವವನ್ನು ನೀಡುವುದಲ್ಲದೆ ಕಂಪ್ಯೂಟರ್, ಭರತನಾಟ್ಯ ,ಯೋಗ, ಸಂಗೀತ ಕರಾಟೆ ,ಯಕ್ಷಗಾನ ಮುಂತಾದ ಚಟುವಟಿಕೆಗಳಿಗೆ ಪ್ರೋತ್ಸಾಹವನ್ನು ನೀಡುತ್ತಿದ್ದು, ಉತ್ತಮ ತರಬೇತಿದಾರರಿಂದ ತರಬೇತಿಯನ್ನು ನೀಡಲಾಗುತ್ತಿದೆ .ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಲಾ ವಾಹನದ ವ್ಯವಸ್ಥೆ ಮತ್ತು ಮೂರನೇ ತರಗತಿಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ವಸತಿ ನಿಲಯದ ವ್ಯವಸ್ಥೆ ಇದೆ. ಬೇರೆ ಬೇರೆ ಜಿಲ್ಲೆ, ರಾಜ್ಯಗಳ ಮಕ್ಕಳು ಇಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ. ಉತ್ತಮ ಪಿಯು ಕಾಲೇಜಿನ ವ್ಯವಸ್ಥೆಯಿದ್ದು, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ. ಪಿಯುಸಿ ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಜೆ ಇ ಇ ವಿಶೇಷ ತರಬೇತಿಗಳನ್ನು ನೀಡಲಾಗುತ್ತಿದೆ. ಮಾತಾ ಪಿತಾ ಗುರುದೇವೋಭವ ಎಂಬ ಪೂಜ್ಯನೀಯ ಕಾರ್ಯಕ್ರಮವು ದ್ವಿತೀಯ ಪಿಯುಸಿ ಮತ್ತು ಎಸ್ ಎಲ್ ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮವು ಪ್ರತಿ ವರ್ಷ ನಡೆಯುತ್ತದೆ. ಇಂತಹ ಸಾಧನೆಗೆ ಕುಂಭಶ್ರೀ ವಿದ್ಯಾಸಂಸ್ಥೆಯನ್ನು ಗುರುತಿಸಿ ರಾಜ್ಯ ಪ್ರಶಸ್ತಿ ಪಡೆದು ಕೊಂಡಿರುವುದು ಕುಂಭಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಗಿರೀಶ್ ಕೆ. ಹೆಚ್ ಹಾಗೂ ಸಂಚಾಲಕರಾದ ಅಶ್ವಿತ್ ಕುಲಾಲ್ ಹಾಗೂ ಎಲ್ಲಾ ಶಿಕ್ಷಕ ವೃಂದ ಮತ್ತು ಶಿಕ್ಷಕ, ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳಿಗೆ ಹೆಮ್ಮೆಯ ವಿಷಯ.

Related posts

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಆಗ್ರಹ: ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸ್ ರಿಗೆ ದೂರು

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

Suddi Udaya

ವೇಣೂರು: ಹಂದೇವ್ ನಲ್ಲಿ ಸಂಜೀವ ದೇವಾಡಿಗರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ರವರಿಂದ ಹಸ್ತಾಂತರ

Suddi Udaya

ತೆಂಕಕಾರಂದೂರು : ಗಿಂಡಾಡಿ ಎಂಬಲ್ಲಿ ಚಿರತೆ ಪ್ರತ್ಯಕ್ಷ

Suddi Udaya

ಯಶಸ್ವಿ ಸಹಕಾರಿ‌ ಸಪ್ತಾಹ: ಮಡಂತ್ಯಾರು ಸೊಸೈಟಿ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾರವರಿಗೆ ಗೌರವಾರ್ಪಣೆ

Suddi Udaya
error: Content is protected !!