22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು

ಮಲವಂತಿಗೆ : ದಿಡುಪೆ ಗ್ರಾಮಸ್ಥರು ಹಾಗೂ ರಸ್ತೆ ಸಾರಿಗೆ ವ್ಯವಸ್ಥಾಪಕರ ಮೂಲಕ ಅ.22ರಂದು ಬೆಳಗ್ಗೆ ದಿಡುಪೆಯಿಂದ ಸುಮಾರು 2.5 ಕಿ.ಮೀ ಮಲವಂತಿಗೆ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಜಕೆ, ಮಲವಂತಿಗೆ ಭಾಗಕ್ಕೆ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕ ಗ್ರಾಮಸ್ಥರ ಅನುಕೂಲಕ್ಕಾಗಿ ಮಲವಂತಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶ್ರೀಮತಿ ರೋಹಿಣಿ ಜಯವರ್ಮ ಗೌಡ ಕಲ್ಬೆಟ್ಟು ಇವರ ಮೂಲಕ ಚಾಲನೆ ನೀಡಲಾಯಿತು.

ಈ ರಸ್ತೆ ಸಾರಿಗೆ ಸಂಪರ್ಕ ವಿಸ್ತರಣೆ ವ್ಯವಸ್ಥೆಗೆ ಜು .1 ರಂದು ಶಾಸಕ ಹರೀಶ್ ಪೂಂಜ ರವರು ಕೆಎಸ್ಸಾರ್ಟಿಸಿ ಜನಸ್ಪಂದನಾ ಕಾರ್ಯಕ್ರಮ ಏರ್ಪಡಿಸಿದ್ದರು. ಈ ಸಂದರ್ಭದಲ್ಲಿ ಮಲವಂತಿಗೆ ಗ್ರಾಮದ ತೀಕ್ಷಿತ್ ಕೆ. ಕಲ್ಬೆಟ್ಟು ರವರು ಗ್ರಾಮದ ಅಭಿವೃದ್ಧಿಯ ಉದ್ದೇಶದಿಂದ ತಮ್ಮ ಅಭಿಪ್ರಾಯವನ್ನು ಸಭೆಯಲ್ಲಿ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಕಜಕ್ಕೆ ಮಲವಂತಿಗೆ ಇಲ್ಲಿ ಸುಮಾರು 100 ಕ್ಕೂ ಅಧಿಕ ವಿದ್ಯಾರ್ಥಿಗಳು

ವಿದ್ಯಾಭ್ಯಾಸವನ್ನು ಮಾಡುತ್ತಿದ್ದು ಅದಲ್ಲದೆ ವಿವಿಧ ರೀತಿಯ ಚಟುವಟಿಕೆಯಲ್ಲಿ ಹಾಗೂ ಉತ್ತಮ ಶಾಲೆ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆದುಕೊಂಡ ವಿದ್ಯಾಸಂಸ್ಥೆಯಾಗಿದ್ದು, ಅದಲ್ಲದೆ ಮಲವಂತಿಗೆ ಮತ್ತು ಮಿತ್ತಬಾಗಿಲು ಕೇವಲ 2 ಗ್ರಾಮದ ವಿದ್ಯಾರ್ಥಿಗಳು ಸರಕಾರಿ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದು, ಇಲ್ಲಿಯವರೆಗೆ ರಸ್ತೆ ಇದ್ದರೂ ಕೂಡ ಮೂಲಭೂತ ಸೌಕರ್ಯದ ಕೊರತೆಯಿಂದ ಸುಮಾರು 2.5 ಕಿ.ಮೀ ನಡೆದುಕೊಂಡು ಹೋಗುವ ಪರಿಸ್ಥಿತಿ ಸುಮಾರು ವರ್ಷಗಳಿಂದ ನಡೆಯುತ್ತಿತ್ತು, ಸುಮಾರು 250 ಕ್ಕೂ ಅಧಿಕ ಮನೆಗಳಿದ್ದು ಅಲ್ಲಿಯ ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮಸ್ಥರಿಗೆ ತುಂಬಾ ಅನುಕೂಲ ಆಗುವಂತೆ ಕೆಎಸ್ಸಾರ್ಟಿಸಿ ಪುತ್ತೂರು ವಿಭಾಗಕ್ಕೆ ಹಾಗೂ ಧರ್ಮಸ್ಥಳ ವಿಭಾಗಕ್ಕೆ ಹಾಗೂ ಶಾಸಕರಿಗೆ ಜು. 1 ರಂದು ಕೆಎಸ್ಸಾರ್ಟಿಸಿ ಜನಸ್ಪಂದನಾ ಸಭೆಯ ಮೂಲಕ ಗ್ರಾಮಸ್ಥರ ಪರವಾಗಿ ನೀಡಿದ ಮನವಿಗೆ ಸ್ಪಂದಿಸಿ. ಬಸ್ ಸಂಚಾರ ವಿಸ್ತರಣೆ ಅನುಕೂಲವಾಯಿತು.


ಇಂದು(ಅ.22) ಬೆಳಗ್ಗೆ 7.30ಕ್ಕೆ ಎರಡು ಕೆಎಸ್ಸಾರ್ಟಿಸಿ ಬಸ್ ಗಳನ್ನು ದಿಡುಪೆಯಿಂದ ಕಜಕ್ಕೆ ಭಾಗಕ್ಕೆ ವಿಶೇಷ ರೀತಿಯಲ್ಲಿ ಪುಟ್ಟ ವಿದ್ಯಾರ್ಥಿಗಳೊಂದಿಗೆ ಗ್ರಾಮಸ್ಥರು ಸೇರಿ ಹೂವಿನ ಅಲಂಕಾರ ಪುಷ್ಪಾರ್ಚನೆ ಹಾಗೂ ಸಿಹಿ ತಿಂಡಿ ಹಂಚಿ ಸ್ವಾಗತಿಸುವ ಮೂಲಕ ಚಾಲನೆ ನೀಡಿದರು.

ಕರ್ನಾಟಕ ಸಾರಿಗೆ ವ್ಯವಸ್ಥೆಯ ಸಿಬ್ಬಂದಿ ವರ್ಗದವರಾದ ನಾರಾಯಣ ಪೂಜಾರಿ ಮುಂಡಾಜೆ ಹಾಗೂ ಚಾಲಕರು ಮತ್ತು ನಿರ್ವಾಹಕರಾದ ವಿನಾಯಚಂದ್ರ, ಕರುಣಾಕರ, ಮತ್ತು ದಯಾನಂದ ಉಪಸ್ಥಿತರಿದ್ದರು.

ಬಂಗಾಡಿ ಸಿ.ಎ ಬ್ಯಾಂಕ್ ನಿರ್ದೇಶಕರಾದ ಕೇಶವ ಎಂ.ಕೆ, ಹಾಲು ಉತ್ಪಾದಕರ ಸಹಕಾರಿ ಸಂಘ ಮಲವಂತಿಗೆ ಅಧ್ಯಕ್ಷ ನಾರಾಯಣ ಗೌಡ, ವಿದ್ಯಾಗಣಪತಿ ಸೇವಾ ಸಮಿತಿ ಅಧ್ಯಕ್ಷ ತೀಕ್ಷಿತ್ ಕೆ.ಕಲ್ಬೆಟ್ಟು, ಶ್ರೀ ಸಾರ್ವಜನಿಕ ಗಣೇಶೋತ್ಸವ ಟ್ರಸ್ಟ್ ನ ಅಧ್ಯಕ್ಷ ಸಂತೋಷ್ ಪೂಜಾರಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಜಕೆಯ ಶಿಕ್ಷಕರಾದ ರಂಗನಾಥ ಮತ್ತು ಪರಮೇಶ್ವರ್, ಎಸ್.ಡಿ.ಎಂ.ಸಿ ಅಧ್ಯಕ್ಷ ಶೇಖರ ಗೌಡ ಪೊದ್ಕೆತರು, ಹಾಗೂ ಗ್ರಾಮಸ್ಥರಾದ ಮಧುಸೋದನ್ ಮಲ್ಲ, ಶೇಕರ ಗೌಡ ಹೊಳೆಕೆರೆ, ರಾಧಾಕೃಷ್ಣ ಗೌಡ ಮಜಲು, ರಮೇಶ್ ಗೌಡ ವಿದ್ಯಾನಗರ, ಸಚಿನ್ ಗೌಡ ಬದ್ಲಾಯಿ, ಹರಿ ಭಟ್, ಕಾರ್ಯದರ್ಶಿ ಗೋಪಾಲಕೃಷ್ಣ ದೇವಸ್ಥಾನ ಟ್ರಸ್ಟ್ ಸಂಜೀವ ಗೌಡ ಪುನ್ಕೆದಡಿ, ರಮೇಶ್ ಗೌಡ, ಸಂಪತ್ ಪೂಜಾರಿ ಕಜಕ್ಕೆ, ಸಾಗರ್ ಅಡ್ಡಕೊಡಂಗೆ, ರಾಜೇಶ್ ಗೌಡ ಬರ್ಕಲಟ್ಟು, ಗ್ರಾಮಸ್ಥರು ಹಾಗೂ ಕಜಕ್ಕೆ ಶಾಲೆ ಪುಟಾಣಿಗಳು,ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಮುಖ್ಯಸ್ಥ ಉಮೇಶ್ ಗೌಡ ಸ್ವಾಗತಿಸಿ, ಶ್ರೀ ವಿದ್ಯಾಗಣಪತಿ ಸೇವೆ ಸಮಿತಿಯ ಕಾರ್ಯದರ್ಶಿ ಜಯಂತ ಹೆಗ್ಡೆ ವಂದಿಸಿದರು.

Related posts

ಆಪರೇಷನ್ ಸಿಂಧೂರ: ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

Suddi Udaya

ಮಂಜೊಟ್ಟಿ ಹೋಲಿಕ್ರಾಸ್ ಚರ್ಚ್ ನಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ, ಪ್ರತಿಷ್ಠಾಪನ ಸಂಭ್ರಮ

Suddi Udaya

ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭೆ

Suddi Udaya

ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಉಡುಪಿ ಪೇಜಾವರ ಸ್ವಾಮೀಜಿ ಬೇಟಿ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಭೇಟಿ

Suddi Udaya
error: Content is protected !!