April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: 22ನೇ ಯ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

ಶ್ರೀ ಕ್ಷೇತ್ರ ಧರ್ಮಸ್ಥಳದ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್(ರಿ). ಆಶ್ರಯದಲ್ಲಿ “ನಮ್ಮೂರ ಜಾತ್ರೆಗಳು” ಎಂಬ ವಿಷಯದ ಕುರಿತು 22ನೆಯ ರಾಜ್ಯಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆಯನ್ನು ಸಂಯೋಜಿಸಲಾಗಿದೆ.

20 x 14 ಸೆಂ.ಮೀ ಗಾತ್ರದ ಡ್ರಾಯಿಂಗ್ ಶೀಟ್, ಸ್ಪರ್ಧಾ ಕಾರ್ಡ್ ಅಥವಾ ಅಂಚೆ ಕಾರ್ಡ್ ಮೂಲಕ ಚಿತ್ರ ಬಿಡಿಸಬಹುದು. ಸ್ಪರ್ಧೆಯು ಕರ್ನಾಟಕದವರಿಗೆ ಮಾತ್ರ ಅನ್ವಯಿಸುತ್ತದೆ. ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ. ಪ್ರಾಥಮಿಕ ಶಾಲಾ ವಿಭಾಗ, ಪ್ರೌಢ ಶಾಲಾ ವಿಭಾಗ, ಕಾಲೇಜು ವಿಭಾಗ ಹಾಗೂ ಸಾರ್ವಜನಿಕ ವಿಭಾಗ ಹೀಗೆ ನಾಲ್ಕು ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಪ್ರತೀ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದವರಿಗೆ ನಗದು ಬಹುಮಾನ ಹಾಗೂ ಸ್ಮರಣಿಕೆ ನೀಡಿ, ಗೌರವಿಸಲಾಗುವುದು.

ಪೆನ್ಸಿಲ್, ಜಲವರ್ಣ, ತೈಲವರ್ಣ ಅಥವಾ ಇಂಡಿಯನ್ ಇಂಕ್ ಹಾಗೂ ವಿವಿಧ ರೀತಿಯಿಂದ ಚಿತ್ರಗಳನ್ನು ರಚಿಸಬಹುದಾಗಿದೆ. ಒಬ್ಬರು ಎಷ್ಟು ಚಿತ್ರಗಳನ್ನು ಬೇಕಾದರೂ ಕಳುಹಿಸಬಹುದು. ವಿದ್ಯಾರ್ಥಿಗಳಾಗಿದ್ದಲ್ಲಿ ತಮ್ಮ ಮನೆ ವಿಳಾಸ (ದೂರವಾಣಿ ಸಂಖ್ಯೆ ಸಹಿತ) ವಿದ್ಯಾಲಯದ ಮುದ್ರೆ ಹಾಗೂ ಶಾಲಾ ಕಾಲೇಜಿನ ಮುಖ್ಯಸ್ಥರ ಸಹಿಯೊಂದಿಗೆ ದೃಢೀಕರಿಸಿ ಕಳುಹಿಸಬೇಕು. ಶಾಲಾ ಮುಖ್ಯಸ್ಥರ ಸಹಿಯಿಲ್ಲದಿದ್ದಲ್ಲಿ ಅಂತಹ ಚಿತ್ರಗಳನ್ನು ಸಾರ್ವಜನಿಕ ವಿಭಾಗ ಎಂದು ಪರಿಗಣಿಸಲಾಗುವುದು. ಸಾರ್ವಜನಿಕ ವಿಭಾಗದವರು ಕೇವಲ ಸಾರ್ವಜನಿಕ ವಿಭಾಗ ಎಂದು ಬರೆದು ಸ್ಪರ್ಧಿಯ ಪೂರ್ಣ ವಿಳಾಸ (ದೂರವಾಣಿ ಸಂಖ್ಯೆ ಸಹಿತ) ಕಳುಹಿಸಬೇಕು.

ಸ್ಪರ್ಧಿಗಳು ಚಿತ್ರಗಳನ್ನು ತಮ್ಮ ಪೂರ್ಣ ವಿಳಾಸ ಹಾಗೂ ದೂರವಾಣಿ ಸಂಖ್ಯೆಯೊಂದಿಗೆ 31-03-2025ರ ಒಳಗಾಗಿ ನಿರ್ದೇಶಕರು, ಅಂಚೆ-ಕುಂಚ ವಿಭಾಗ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್‌(ರಿ). ಶ್ರೀ ಕ್ಷೇತ್ರ ಧರ್ಮಸ್ಥಳ- 574216, ಬೆಳ್ತಂಗಡಿ ತಾಲೂಕು, ದ.ಕ. ಜಿಲ್ಲೆ ಈ ವಿಳಾಸಕ್ಕೆ ಕಳುಹಿಸಬೇಕೆಂದು ಯೋಜನೆಯ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಿಗೆ ಗುರುವಂದನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕ್ರೀಡೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಬೆಳ್ತಂಗಡಿ : ಶ್ರೀ ಗುರುದೇವ ಕಾಲೇಜಿನ ಕ್ರೀಡಾಕೂಟ ಉದ್ಘಾಟನೆ

Suddi Udaya

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ: ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರ ಪ್ರತಿಭಟನೆ

Suddi Udaya
error: Content is protected !!