23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಜಿನ ಭಜನಾ ಸ್ಪರ್ಧೆಯ ಸಮಾಲೋಚನಾ ಸಭೆ

ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್, ವಲಯ 8 , ಜಿನ ಭಜನಾ ಸೀಸನ್ 8 ಇದರ ಮಂಗಳೂರು ವಿಭಾಗದ ಜಿನ ಭಜನಾ ಸ್ಪರ್ಧೆ ,ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ, ಶ್ರೀ ಮಂಜುನಾಥ ಸ್ವಾಮಿ ಕಲಾ ಮಂಟಪ ಬೆಳ್ತಂಗಡಿಯಲ್ಲಿ ನ.24 ರಂದು ಜರಗಲಿದ್ದು, ಸುರೇಂದ್ರ ಕುಮಾರ್ ,ಶ್ರೀಮತಿ ಅನಿತಾ ಸುರೇಂದ್ರ ಕುಮಾರ್ ಅವರ ಮಾರ್ಗದರ್ಶನದಂತೆ ಸಮಾಲೋಚನಾ ಸಭೆ ಉಜಿರೆಯಲ್ಲಿ ಜರಗಿತು.

ವಲಯ ಉಪಾಧ್ಯಕ್ಷ ವೀರ್ ಸುದರ್ಶನ್ ಜೈನ್, ವೀರಾಂಗನ ಶ್ರೀಮತಿ ಸೋನಿಯಾ ಯಶೋವರ್ಮ, ಪೂರನ್ ವರ್ಮ, ವಿಭಾಗ ಕಾರ್ಯದರ್ಶಿ ವೀರ್ ಸುಭಾಶ್ಚಂದ್ರ, ವೇಣೂರು ತೀರ್ಥ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ವೀರ್ ಪ್ರವೀಣ್ ಕುಮಾರ್, ವಲಯ ನಿರ್ದೇಶಕರಾದ ವೀರ್ ಬಿ.ಸೋಮಶೇಖರ್ ಶೆಟ್ಟಿ, ವೀರ್ ಪ್ರಮೋದ್ ಕುಮಾರ್, ವೀರಾಂಗಾನ ರಾಜಶ್ರೀ ಸುದರ್ಶನ್ ಮತ್ತು ,ಶ್ರೀಮತಿ ತ್ರಿಶಾಲ ಉದಯಕುಮಾರ್ ಮಲ್ಲ, ಶ್ರೀಮತಿ ರಜತ ಪಿ ಶೆಟ್ಟಿ, ಪೂರ್ವ ಅಧ್ಯಕ್ಷರು, ವೀರ, ವೀರಾಂಗನೆಯರು ಭಾಗವಹಿಸಿದ್ದರು,

ಸಭೆಯ ಅಧ್ಯಕ್ಷತೆಯನ್ನು, ಡಾ| ನವೀನ್ ಕುಮಾರ್ ಜೈನ್ ವಹಿಸಿದ್ದರು, ಕಾರ್ಯದರ್ಶಿ ಸಂಪತ್ ಕುಮಾರ್, ಖಜಾಂಜಿ ನಿಖಿತ್ ಕುಮಾರ್, ಧೀಮತಿ ಮಹಿಳಾ ಸಮಾಜದ ಸದಸ್ಯೆಯರು, ಭಾಗವಹಿಸಿ ಕಾರ್ಯ ಕ್ರಮ ಯಶಸ್ಸಿನ ಬಗ್ಗೆ ಚರ್ಚಿಸಲಾಯಿತು. ಕಾರ್ಯಕ್ರಮದ ನಿರ್ವಹಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಯಿತು.

Related posts

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

Suddi Udaya

ಶಿವಳ್ಳಿ ಸಮಾಜದ ಅರಸಿನಮಕ್ಕಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಂಗಳೂರು ವಿವಿ ಸ್ನಾತಕ ಪದವಿ ಪರೀಕ್ಷೆ ಫಲಿತಾಂಶ: ಎಂ.ಎಸ್.ಡಬ್ಲ್ಯೂನಲ್ಲಿ ಅಜಿರದ ಯಶಸ್ವಿನಿಗೆ ಪ್ರಥಮ ರ‍್ಯಾಂಕ್

Suddi Udaya

ಮತದಾರರ ಪಟ್ಟಿ ಮ್ಯಾಪಿಂಗ್ ಮಾಡಿಸಿ-ಜಿಲ್ಲಾ ಚುನಾವಣಾಧಿಕಾರಿ

Suddi Udaya
error: Content is protected !!