22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಜಿನ ಭಜನಾ ಸ್ಪರ್ಧೆಯ ಸಮಾಲೋಚನಾ ಸಭೆ

ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್, ವಲಯ 8 , ಜಿನ ಭಜನಾ ಸೀಸನ್ 8 ಇದರ ಮಂಗಳೂರು ವಿಭಾಗದ ಜಿನ ಭಜನಾ ಸ್ಪರ್ಧೆ ,ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ, ಶ್ರೀ ಮಂಜುನಾಥ ಸ್ವಾಮಿ ಕಲಾ ಮಂಟಪ ಬೆಳ್ತಂಗಡಿಯಲ್ಲಿ ನ.24 ರಂದು ಜರಗಲಿದ್ದು, ಸುರೇಂದ್ರ ಕುಮಾರ್ ,ಶ್ರೀಮತಿ ಅನಿತಾ ಸುರೇಂದ್ರ ಕುಮಾರ್ ಅವರ ಮಾರ್ಗದರ್ಶನದಂತೆ ಸಮಾಲೋಚನಾ ಸಭೆ ಉಜಿರೆಯಲ್ಲಿ ಜರಗಿತು.

ವಲಯ ಉಪಾಧ್ಯಕ್ಷ ವೀರ್ ಸುದರ್ಶನ್ ಜೈನ್, ವೀರಾಂಗನ ಶ್ರೀಮತಿ ಸೋನಿಯಾ ಯಶೋವರ್ಮ, ಪೂರನ್ ವರ್ಮ, ವಿಭಾಗ ಕಾರ್ಯದರ್ಶಿ ವೀರ್ ಸುಭಾಶ್ಚಂದ್ರ, ವೇಣೂರು ತೀರ್ಥ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ವೀರ್ ಪ್ರವೀಣ್ ಕುಮಾರ್, ವಲಯ ನಿರ್ದೇಶಕರಾದ ವೀರ್ ಬಿ.ಸೋಮಶೇಖರ್ ಶೆಟ್ಟಿ, ವೀರ್ ಪ್ರಮೋದ್ ಕುಮಾರ್, ವೀರಾಂಗಾನ ರಾಜಶ್ರೀ ಸುದರ್ಶನ್ ಮತ್ತು ,ಶ್ರೀಮತಿ ತ್ರಿಶಾಲ ಉದಯಕುಮಾರ್ ಮಲ್ಲ, ಶ್ರೀಮತಿ ರಜತ ಪಿ ಶೆಟ್ಟಿ, ಪೂರ್ವ ಅಧ್ಯಕ್ಷರು, ವೀರ, ವೀರಾಂಗನೆಯರು ಭಾಗವಹಿಸಿದ್ದರು,

ಸಭೆಯ ಅಧ್ಯಕ್ಷತೆಯನ್ನು, ಡಾ| ನವೀನ್ ಕುಮಾರ್ ಜೈನ್ ವಹಿಸಿದ್ದರು, ಕಾರ್ಯದರ್ಶಿ ಸಂಪತ್ ಕುಮಾರ್, ಖಜಾಂಜಿ ನಿಖಿತ್ ಕುಮಾರ್, ಧೀಮತಿ ಮಹಿಳಾ ಸಮಾಜದ ಸದಸ್ಯೆಯರು, ಭಾಗವಹಿಸಿ ಕಾರ್ಯ ಕ್ರಮ ಯಶಸ್ಸಿನ ಬಗ್ಗೆ ಚರ್ಚಿಸಲಾಯಿತು. ಕಾರ್ಯಕ್ರಮದ ನಿರ್ವಹಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಯಿತು.

Related posts

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ನೂತನ ಬಾವಿ ನಿರ್ಮಾಣಕ್ಕೆ ಮುಹೂರ್ತ

Suddi Udaya

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

Suddi Udaya

ಪ.ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya

ಬಂಗ್ಲೆಗುಡ್ಡಕ್ಕೆ ಮತ್ತೆ ಎಂಟ್ರಿ ಕೊಟ್ಟ ಎಸ್.ಐ.ಟಿ ಅಧಿಕಾರಿಗಳು

Suddi Udaya

ಗುರುವಾಯನಕೆರೆ: ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು, ಟ್ರಾಫಿಕ್ ಜಾಮ್

Suddi Udaya
error: Content is protected !!