27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

ಮಲವಂತಿಗೆ: ಇಲ್ಲಿಯ ಮಲ್ಲ, ನಂದಿಕಾಡು, ಆರ್ನಂದಿಕಾಡು ಪರಿಸರದಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳು ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ಕೃಷಿಯನ್ನು ನಾಶಪಡಿಸಿದೆ. ಸದಾಶಿವ ಮಲೆಕುಡಿಯ ತೋಟದಲ್ಲಿ ಸುಮಾರು ೧೫೦ ಅಡಿಕೆ ಮರ, ತೆಂಗಿನ ಮರಗಳು ಹಾಗೂ ಇತರ ಮರಗಳನ್ನೂ ನೆಲಕ್ಕೆ ಉರುಳಿಸಿದೆ. ಇವರಿಗೆ ಸೇರಿದ ಒಂದುವರೆ ಎಕ್ರೆ ಗದ್ದೆಯಲ್ಲಿನ ಭತ್ತದ ಕೃಷಿಯನ್ನು ಸಂಪೂರ್ಣ ನಾಶಪಡಿಸಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಮನೆಗಳ ಸಮೀಪದಲ್ಲಯೇ ಕಾಡಾನೆಗಳು ಓಡಾಟ ನಡೆಸಿದ್ದು ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಆರಕ್ಕೂ ಹೆಚ್ಚು ಆನೆಗಳು ತಂಡದಲ್ಲಿದ್ದು, ಇದೇ ಪರಿಸರದ ಅರಣ್ಯದಲ್ಲಿ ಬೀಡು ಬಿಟ್ಟಿರುವ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ ಹಿಂದೆ ಆರಕ್ಕೂ ಹೆಚ್ಚು ಆನೆಗಳಿದ್ದ ಹಿಂಡೊಂದು ಚಾರ್ಮಾಡಿಯಲ್ಲಿ ಕೃಷಿಗೆ ಹಾನಿಯುಂಟು ಮಾಡಿತ್ತು ಇದೇ ಆನೆಗಳು ಇದೀಗ ಮಲವಂತಿಗೆ ಪ್ರದೇಶಕ್ಕೆ ಬಂದಿರಬಹುದು ಎಂದು ಅನುಮಾನಿಸಲಾಗಿದೆ.

Related posts

ಕೊಕ್ಕಡ ಆನೆ ದಾಳಿ ದುರಂತ ಅರಣ್ಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಯಕ್ಷ ಸಂಭ್ರಮ- 2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕ್ವಿಜ್ ಸ್ಪರ್ಧೆ: ನಾರಾವಿಯ ಸಂತ ಅಂತೋನಿ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

– ಐದು ವರ್ಷಗಳ ಸಾಧನೆಯ ಸಂಭ್ರಮದಲ್ಲಿರುವ ಪ್ರತಿಷ್ಠಿತ ಎಕ್ಸೆಲ್ ವಿದ್ಯಾಸಂಸ್ಥೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ. -ವಿದ್ಯಾ ಗಣಪತಿ ದೇವರ ವಿಗ್ರಹ ಅನಾವರಣ,ಎಕ್ಸೆಲ್ ಪಂಚ ಪರ್ವ. -ಕಡಿಮೆ ಅವಧಿಯಲ್ಲಿ ಯಶಸ್ವಿನ ಶಿಖರವೇರಿದೆ ಎಕ್ಸೆಲ್ ವಿದ್ಯಾ ಸಂಸ್ಥೆ:ಡಿ.ಕೆ ಶಿವಕುಮಾರ್

Suddi Udaya

ಎಂ.ಎಸ್ಸಿ ಸ್ನಾತಕೋತ್ತರ ಪರೀಕ್ಷೆ: ಅನಾಲಿಟಿಕಲ್‌ ಕೆಮಿಸ್ಟ್ರಿ ವಿಭಾಗದಲ್ಲಿ ಪ್ರಿಮಲ್ ನಿಲ್ಮಾ ರೊಡ್ರಿಗಸ್ ರವರಿಗೆ ಪ್ರಥಮ ರ್ಯಂಕ್

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya
error: Content is protected !!