September 6, 2026
Uncategorized

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

ಮಲವಂತಿಗೆ: ಇಲ್ಲಿಯ ಮಲ್ಲ, ನಂದಿಕಾಡು, ಆರ್ನಂದಿಕಾಡು ಪರಿಸರದಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳು ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ಕೃಷಿಯನ್ನು ನಾಶಪಡಿಸಿದೆ. ಸದಾಶಿವ ಮಲೆಕುಡಿಯ ತೋಟದಲ್ಲಿ ಸುಮಾರು ೧೫೦ ಅಡಿಕೆ ಮರ, ತೆಂಗಿನ ಮರಗಳು ಹಾಗೂ ಇತರ ಮರಗಳನ್ನೂ ನೆಲಕ್ಕೆ ಉರುಳಿಸಿದೆ. ಇವರಿಗೆ ಸೇರಿದ ಒಂದುವರೆ ಎಕ್ರೆ ಗದ್ದೆಯಲ್ಲಿನ ಭತ್ತದ ಕೃಷಿಯನ್ನು ಸಂಪೂರ್ಣ ನಾಶಪಡಿಸಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಮನೆಗಳ ಸಮೀಪದಲ್ಲಯೇ ಕಾಡಾನೆಗಳು ಓಡಾಟ ನಡೆಸಿದ್ದು ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಆರಕ್ಕೂ ಹೆಚ್ಚು ಆನೆಗಳು ತಂಡದಲ್ಲಿದ್ದು, ಇದೇ ಪರಿಸರದ ಅರಣ್ಯದಲ್ಲಿ ಬೀಡು ಬಿಟ್ಟಿರುವ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ ಹಿಂದೆ ಆರಕ್ಕೂ ಹೆಚ್ಚು ಆನೆಗಳಿದ್ದ ಹಿಂಡೊಂದು ಚಾರ್ಮಾಡಿಯಲ್ಲಿ ಕೃಷಿಗೆ ಹಾನಿಯುಂಟು ಮಾಡಿತ್ತು ಇದೇ ಆನೆಗಳು ಇದೀಗ ಮಲವಂತಿಗೆ ಪ್ರದೇಶಕ್ಕೆ ಬಂದಿರಬಹುದು ಎಂದು ಅನುಮಾನಿಸಲಾಗಿದೆ.

Related posts

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ವಗ್ಗ: ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ ಶ್ರೀ ಲಕ್ಷ್ಮಿ ಪೂಜೆ ಕೂಪನ್ ಬಿಡುಗಡೆ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ

Suddi Udaya

ಚಲಿಸುತ್ತಿದ್ದ ಲಾರಿಯ ಬೋಲ್ಟ್ ಕಟ್: ಚಾಲಕನ ಮುಂಜಾಗ್ರತೆಯಿಂದ ತಪ್ಪಿದಅನಾಹುತ

Suddi Udaya

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಕ್ಷೀರಸಂಗಮ ಉದ್ಘಾಟನೆ

Suddi Udaya
error: Content is protected !!