25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

ಮಲವಂತಿಗೆ: ಇಲ್ಲಿಯ ಮಲ್ಲ, ನಂದಿಕಾಡು, ಆರ್ನಂದಿಕಾಡು ಪರಿಸರದಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳು ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ಕೃಷಿಯನ್ನು ನಾಶಪಡಿಸಿದೆ. ಸದಾಶಿವ ಮಲೆಕುಡಿಯ ತೋಟದಲ್ಲಿ ಸುಮಾರು ೧೫೦ ಅಡಿಕೆ ಮರ, ತೆಂಗಿನ ಮರಗಳು ಹಾಗೂ ಇತರ ಮರಗಳನ್ನೂ ನೆಲಕ್ಕೆ ಉರುಳಿಸಿದೆ. ಇವರಿಗೆ ಸೇರಿದ ಒಂದುವರೆ ಎಕ್ರೆ ಗದ್ದೆಯಲ್ಲಿನ ಭತ್ತದ ಕೃಷಿಯನ್ನು ಸಂಪೂರ್ಣ ನಾಶಪಡಿಸಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಮನೆಗಳ ಸಮೀಪದಲ್ಲಯೇ ಕಾಡಾನೆಗಳು ಓಡಾಟ ನಡೆಸಿದ್ದು ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಆರಕ್ಕೂ ಹೆಚ್ಚು ಆನೆಗಳು ತಂಡದಲ್ಲಿದ್ದು, ಇದೇ ಪರಿಸರದ ಅರಣ್ಯದಲ್ಲಿ ಬೀಡು ಬಿಟ್ಟಿರುವ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ ಹಿಂದೆ ಆರಕ್ಕೂ ಹೆಚ್ಚು ಆನೆಗಳಿದ್ದ ಹಿಂಡೊಂದು ಚಾರ್ಮಾಡಿಯಲ್ಲಿ ಕೃಷಿಗೆ ಹಾನಿಯುಂಟು ಮಾಡಿತ್ತು ಇದೇ ಆನೆಗಳು ಇದೀಗ ಮಲವಂತಿಗೆ ಪ್ರದೇಶಕ್ಕೆ ಬಂದಿರಬಹುದು ಎಂದು ಅನುಮಾನಿಸಲಾಗಿದೆ.

Related posts

ಜ.25: ಬೆಳ್ತಂಗಡಿಯಲ್ಲಿ ಕೋಟಕ್ ಲೈಫ್ ಉದ್ಘಾಟನೆ

Suddi Udaya

ಕೊಕ್ಕಡ ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

Suddi Udaya

ರಹ್ಮಾನಿಯಾ ಜುಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಕಾಜೂರು ಜಂಇಯ್ಯತುಲ್ ಉಲಮಾ ಸಮಿತಿ ರಚನೆ

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಮಲವಂತಿಗೆ ಗ್ರಾ.ಪಂ ಎದುರು ಪ್ರತಿಭಟನೆ

Suddi Udaya

ವಿದ್ಯಾರ್ಥಿಗಳಿಗೆ *”ಪ್ರಗತಿ ಹಾಗೂ ಸ್ಪೂರ್ತಿ -2025″ ವ್ಯಕ್ತಿತ್ವ ವಿಕಸನ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ ಸಮಾರೋಪ : ಕೊಂಕಣಿ ಮಾತೃಭಾಷಾ ಶ್ರೀಮಂತಿಕೆಯೇ ನಮ್ಮ ಅಸ್ತಿತ್ವ: ಡಾ. ಕಸ್ತೂರಿ ಮೋಹನ್ ಪೈ

Suddi Udaya
error: Content is protected !!