22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

ಮಲವಂತಿಗೆ: ಇಲ್ಲಿಯ ಮಲ್ಲ, ನಂದಿಕಾಡು, ಆರ್ನಂದಿಕಾಡು ಪರಿಸರದಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳು ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ಕೃಷಿಯನ್ನು ನಾಶಪಡಿಸಿದೆ. ಸದಾಶಿವ ಮಲೆಕುಡಿಯ ತೋಟದಲ್ಲಿ ಸುಮಾರು ೧೫೦ ಅಡಿಕೆ ಮರ, ತೆಂಗಿನ ಮರಗಳು ಹಾಗೂ ಇತರ ಮರಗಳನ್ನೂ ನೆಲಕ್ಕೆ ಉರುಳಿಸಿದೆ. ಇವರಿಗೆ ಸೇರಿದ ಒಂದುವರೆ ಎಕ್ರೆ ಗದ್ದೆಯಲ್ಲಿನ ಭತ್ತದ ಕೃಷಿಯನ್ನು ಸಂಪೂರ್ಣ ನಾಶಪಡಿಸಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಮನೆಗಳ ಸಮೀಪದಲ್ಲಯೇ ಕಾಡಾನೆಗಳು ಓಡಾಟ ನಡೆಸಿದ್ದು ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಆರಕ್ಕೂ ಹೆಚ್ಚು ಆನೆಗಳು ತಂಡದಲ್ಲಿದ್ದು, ಇದೇ ಪರಿಸರದ ಅರಣ್ಯದಲ್ಲಿ ಬೀಡು ಬಿಟ್ಟಿರುವ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ ಹಿಂದೆ ಆರಕ್ಕೂ ಹೆಚ್ಚು ಆನೆಗಳಿದ್ದ ಹಿಂಡೊಂದು ಚಾರ್ಮಾಡಿಯಲ್ಲಿ ಕೃಷಿಗೆ ಹಾನಿಯುಂಟು ಮಾಡಿತ್ತು ಇದೇ ಆನೆಗಳು ಇದೀಗ ಮಲವಂತಿಗೆ ಪ್ರದೇಶಕ್ಕೆ ಬಂದಿರಬಹುದು ಎಂದು ಅನುಮಾನಿಸಲಾಗಿದೆ.

Related posts

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ ಇನ್ನೂ ಕೇವಲ 8 ದಿನ ಮಾತ್ರ

Suddi Udaya

ಮರೋಡಿ: ಮಡ್ಲದಲ್ಲಿ ಬರೆ ಕುಸಿತ ಮನೆಗೆ ಹಾನಿ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬೆಳ್ತಂಗಡಿ ಹಳೆಕೋಟೆ ಬಳಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ಹಿಂದೂ ದೇವಾಲಯಗಳನ್ನು ಸರಕಾರದ ಹಿಡಿತದಿಂದ ಮುಕ್ತಗೊಳಿಸಲು ಒಂದು ದಿನದ ಉಪವಾಸ ಸತ್ಯಾಗ್ರಹ

Suddi Udaya
error: Content is protected !!