April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯುಗಾದಿ ನವ ಪಲ್ಲವಕೆ ನಾಂದಿ – ಸ್ನೇಹ ಕೂಟ ಕಾರ್ಯಕ್ರಮ

ಧರ್ಮಸ್ಥಳ: ಫೇಸ್ಬುಕ್ ಮುಖಪುಟದ ಹೆಸರಾಂತ ಸಾಹಿತ್ಯ ಬಳಗಗಳಲ್ಲಿ ಒಂದಾದ ಯುಗಾದಿ ಬಳಗದ ಸ್ನೇಹ ಪರ್ವ ಕಾರ್ಯಕ್ರಮ
ಅ. 20 ರಂದು ಧರ್ಮಸ್ಥಳದ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳದ ಶ್ರೀಮತಿ ಶ್ಯಾಮಲಾ ಗೋಪಿನಾಥ್ ವಹಿಸಿಕೊಂಡಿದ್ದು, ಉದ್ಘಾಟನೆಯನ್ನು ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕದ ವಿಜಯಕುಮಾರ್ ಜೈನ್, ಅಳದಂಗಡಿ ನೆರವೇರಿಸಿದ್ದರು.

ಮುಖ್ಯ ಅತಿಥಿಗಳಾಗಿ ಪುಣೆಯ ಶರಣಬಸಪ್ಪ ಕುಂಬಾರ್, ಬೆಂಗಳೂರಿನ ಶ್ರೀಮತಿ ಕಲಾವತಿ ಪ್ರಕಾಶ್ ಹಾಗೂ ಅರಸೀಕೆರೆಯ ಹೆಚ್. ಡಿ ದಿವಾಕರ್ ಆಗಮಿಸಿದ್ದರು. ಬೆಂಗಳೂರಿನ ಪಿ. ಎಸ್ ಭಟ್ ಹಾಗೂ ಧರ್ಮಸ್ಥಳದ ಬಿ. ಭುಜಬಲಿಯವರ ಗೌರವ ಉಪಸ್ಥಿತಿಯಲ್ಲಿ ಹಾಗೂ ಯುಗಾದಿ ಬಳಗದ ಸಂಸ್ಥಾಪಕರಾದ ಶ್ರೀನಾಗ್. ಪಿ. ಎಸ್ ಅವರ ಸಾರಥ್ಯದಲ್ಲಿ ಯಶಸ್ವಿಯಾಗಿ ನಡೆಯಿತು.

ಈ ಸಂದರ್ಭದಲ್ಲಿ ಬಳಗದ ಮೂವರು ವ್ಯವಸ್ಥಾಪಕಿಯರ ಕೃತಿ ಬಿಡುಗಡೆ ನಡೆಯಿತು.
ಕಾಸರಗೋಡಿನ ಸೌಮ್ಯ ಗುರು ಕಾರ್ಲೆಯವರ ಹೇಮಾಕ್ಷರಿ, ಬೆಂಗಳೂರಿನ ಶ್ರೀಲತಾ ಭಾರ್ಗವ್ ಅವರ ಸೇವಂತಿಗೆ ಹಾಗೂ ತುಮಕೂರಿನ ಮೀನಾ ನಾಗರಾಜ್ ಅವರ ಭಾವದಿಂಚರ ಕೃತಿಗಳು ಲೋಕಾರ್ಪಣೆಗೊಂಡವು.

ಕೊಡಗಿನ ವೀಣಾ ಉಮೇಶ್ ಪ್ರಾರ್ಥನೆ ಹಾಡಿದರು. ಬೆಂಗಳೂರಿನ ಸುಜಾತಾ ಭಟ್ ಸ್ವಾಗತಿಸಿದರು. ಹೊನ್ನಾವರದ ಶ್ರೀನಾಗ್ ಪಿ. ಎಸ್ ಪ್ರಸ್ತಾವಿಕ ಭಾಷಣ ಮಾಡಿದರು. ಬೆಳ್ತಂಗಡಿಯ ಆಶಾ ಅಡೂರ್, ಶ್ರೀಲತಾ ಭಾರ್ಗವ್ ಹಾಗೂ ಬೆಂಗಳೂರಿನ ದರ್ಶಿನಿ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಮೀನಾ ನಾಗರಾಜ್ ವಂದಿಸಿದರು.


ಕಾರ್ಯಕ್ರಮದ ನಿಮಿತ್ತ ಕವಿಗೋಷ್ಠಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಮುಂಬೈ, ಪುಣೆಯಿಂದ 21 ಕವಿಗಳು ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯದ ವಿವಿಧ ಕಡೆಯಿಂದ ಯುಗಾದಿ ಬಳಗದ ಸದಸ್ಯರು ಆಗಮಿಸಿ ಸ್ನೇಹಪರ್ವ ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು.

Related posts

ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಬಗ್ಗೆ ಸಮಾಲೋಚನೆ ಸಭೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಅರ್ಹ ಕುಟುಂಬಗಳಿಗೆ ಕೃಷಿಗೆ ಸಂಬಂಧಪಟ್ಟ ಉಪಕರಣ ವಿತರಣೆ

Suddi Udaya

ಸಮಾಜ ಸೇವಾ ಟ್ರಸ್ಟ್ ಸಂಸ್ಥಾಪಕ ರವಿ ಕಕ್ಕೆಪದವು ಹಾಗೂ ಸುಬ್ರಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸದಸ್ಯರಿಂದ ಸುಬ್ರಹ್ಮಣ್ಯದ ಕುಮಾರಧಾರ ವೆಂಟೆಡ್ ಡ್ಯಾಮ್ ಬಳಿ ಸ್ವಚ್ಛತಾ ಕಾರ್ಯ

Suddi Udaya

ಧರ್ಮಸ್ಥಳ ಡಾ. ವಿಘ್ನರಾಜ್ ಎಸ್.ಆರ್. ರವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ

Suddi Udaya

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

Suddi Udaya

ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನ

Suddi Udaya
error: Content is protected !!