26.4 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆ

ಪುತ್ತೂರು : ವಿದ್ಯಾಮಾತಾ ಅಕಾಡೆಮಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಗೆ ಪೂರ್ವ ತಯಾರಿ ತರಬೇತಿಯನ್ನು ಪಡೆದಕೊಂಡ ಬಸವರಾಜ್ ಇವರು ಕರ್ನಾಟಕ ರಾಜ್ಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಯ ನೇಮಕಾತಿ ಪ್ರಕ್ರಿಯೆಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗಿ ಇದೀಗ ನೇಮಕಾತಿಗೊಂಡಿರುತ್ತಾರೆ.


ಮೂಲತಃ ಬೆಳಗಾವಿ ಜಿಲ್ಲೆಯ ಕಾಗವಡ ತಾಲೂಕಿನ ಕಾತ್ರಾಳ್ ಗ್ರಾಮದ ನಿವಾಸಿಗಳಾದ ಶಂಕರ ಮತ್ತು ಯಮುನವ್ವ ದಂಪತಿಯ ಪುತ್ರ ಬಸವರಾಜ ಮುದವಿ ರವರು ಪ್ರಸ್ತುತ ಸುಳ್ಯ ಆರಕ್ಷಕ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಮುದವಿಯವರು ಈ ಹಿಂದೆ ಬೆಳ್ಳಾರೆ ಆರಕ್ಷಕ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿದ್ದುಕೊಂಡು ಉನ್ನತ ಸ್ಥಾನಕ್ಕೇರಲು ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಕರ್ತವ್ಯದ ಒತ್ತಡದ ನಡುವೆಯೂ ಅಭ್ಯಾಸ ನಡೆಸಿ ಕಡೆಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆಗೊಂಡು ವಿದ್ಯಾಮಾತಾ ಅಕಾಡೆಮಿಯ ಕೀರ್ತಿಯನ್ನು ಉನ್ನತ ಸ್ಥಾನಕ್ಕೇರಿಸಿದ್ದಾರೆ, ಬಸವರಾಜ ಮುದವಿಯವರ ಈ ಸಾಧನೆಗೆ ಪ್ರಸ್ತುತ ಪುತ್ತೂರು ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಗಿರುವ ಆಂಜನೇಯ ರೆಡ್ಡಿಯವರ ಮಾರ್ಗದರ್ಶನ ಸ್ಮರಣಿಯವಾಗಿದ್ದು, ಹೆತ್ತವರಿಗೂ ಊರಿಗೂ ಇವರ ಅವಿಸ್ಮರಣೀಯವಾದ ಯಶಸ್ಸು ಗೌರವವನ್ನು ತಂದಿದ್ದು ಇನ್ನಷ್ಟು ಆಕಾಂಕ್ಷಿಗಳಿಗೆ ದಾರಿದೀಪವಾಗಿರುವ ವಿದ್ಯಾಮಾತಾ ಅಕಾಡೆಮಿಯ ಮುಂದಿನ ತರಬೇತಿಗಳಿಗೆ ಇನ್ನಷ್ಟು ಬಲ ಬಂದಿದೆ.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ‌ಯವರನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ:ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳ ಕುರಿತು ಚರ್ಚೆ

Suddi Udaya

ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ ” ಇದು ನಮ್ ಶಾಲೆ ” ಚಲನಚಿತ್ರದ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ

Suddi Udaya

ಪುದುವೆಟ್ಟು ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿಂಧೂ ಕೆ.ಎಸ್ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಮುಂಡಾಜೆ: ಸೊಮಂತ್ತಡ್ಕ ನಿವಾಸಿ ಸಾವಿತ್ರಿ ನಿಧನ

Suddi Udaya

ಸೆ.8: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!