April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರ ಉದ್ಘಾಟನೆ

ಶಿಶಿಲ : ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲ ವೈಕುಂಠಪುರ, ಶಿಶಿಲ ಮತ್ತು ಗ್ರಾಮ ಪಂಚಾಯತ್ ಶಿಶಿಲ ಇವುಗಳ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರವು ಶಿಶಿಲ ವೈಕುಂಠಪುರ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲ ಕಟ್ಟಡದಲ್ಲಿ ಅ.22 ರಂದು ಉದ್ಘಾಟನೆಗೊಂಡಿತು.

ಶಿಶಿಲ ಟೈಲರಿಂಗ್‌ ತರಬೇತುದಾರರಾದ ಶ್ರೀಮತಿ ವಿನಯ ಶೆಂಡ್ಯ, ಬಂಡಿಹೊಳೆ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಸೇವಾ ಭಾರತಿ ಕನ್ಯಾಡಿ ಇದರ ಟ್ರಸ್ಟಿ ಕೃಷ್ಣಪ್ಪ ಗುಡಿಗಾರ್ ವಹಿಸಿದರು.

ಮುಖ್ಯ ಅತಿಥಿಗಳಾಗಿ ಶಿಶಿಲ ವೈಕುಂಠಪುರ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಅಧ್ಯಕ್ಷ ಹರೀಶ್ ಕೊಳಂಬೆ ಆಗಮಿಸಿದ್ದರು.

ಅಂಗನವಾಡಿ ಕಾರ್ಯಕರ್ತೆ ಯಶೋಧ ಸ್ವಾಗತಿಸಿದರು. ಸೇವಾ ಭಾರತಿಯ ಸುಮಾ ಕಾರ್ಯಕ್ರಮ ನಿರೂಪಿಸಿ, ಚಂದನ್ ಗುಡಿಗಾರ್ ಧನ್ಯವಾದವಿತ್ತರು.

Related posts

ಇಂದಬೆಟ್ಟು ಎಮ್.ಜೆ.ಎಮ್ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದೀಪಾವಳಿ ಆಚರಣೆ

Suddi Udaya

ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಬಿ.ಕಾಂ ವಿಭಾಗಕ್ಕೆ ಪ್ರಶಸ್ತಿ

Suddi Udaya

ಜನತೆಯ ನಾಡಿ ಮಿಡಿತ ಅರಿತು ವಿಕಸಿತ ಭಾರತದ ಬಜೆಟ್ ಮಂಡನೆ: ಶಾಸಕ ಹರೀಶ್ ಪೂಂಜ

Suddi Udaya

ಶಿಬಾಜೆ: ಪಡಂತ್ತಾಜೆಯಲ್ಲಿ ಒಂಟಿ ಸಲಗ ದಾಳಿ: ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

Suddi Udaya

ಕರ್ನಾಟಕ ರಾಜ್ಯ ಅಮೆಚೂರು ಸಂಸ್ಥೆ ರಾಜ್ಯ ತೀರ್ಪುಗಾರರ ಮಂಡಳಿಯ ಸಂಚಾಲಕರಾಗಿ ಪ್ರಭಾಕರ್ ನಾರಾವಿ ಆಯ್ಕೆ

Suddi Udaya
error: Content is protected !!