September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು

ಮಲವಂತಿಗೆ : ದಿಡುಪೆ ಗ್ರಾಮಸ್ಥರು ಹಾಗೂ ರಸ್ತೆ ಸಾರಿಗೆ ವ್ಯವಸ್ಥಾಪಕರ ಮೂಲಕ ಅ.22ರಂದು ಬೆಳಗ್ಗೆ ದಿಡುಪೆಯಿಂದ ಸುಮಾರು 2.5 ಕಿ.ಮೀ ಮಲವಂತಿಗೆ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಜಕೆ, ಮಲವಂತಿಗೆ ಭಾಗಕ್ಕೆ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕ ಗ್ರಾಮಸ್ಥರ ಅನುಕೂಲಕ್ಕಾಗಿ ಮಲವಂತಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶ್ರೀಮತಿ ರೋಹಿಣಿ ಜಯವರ್ಮ ಗೌಡ ಕಲ್ಬೆಟ್ಟು ಇವರ ಮೂಲಕ ಚಾಲನೆ ನೀಡಲಾಯಿತು.

ಈ ರಸ್ತೆ ಸಾರಿಗೆ ಸಂಪರ್ಕ ವಿಸ್ತರಣೆ ವ್ಯವಸ್ಥೆಗೆ ಜು .1 ರಂದು ಶಾಸಕ ಹರೀಶ್ ಪೂಂಜ ರವರು ಕೆಎಸ್ಸಾರ್ಟಿಸಿ ಜನಸ್ಪಂದನಾ ಕಾರ್ಯಕ್ರಮ ಏರ್ಪಡಿಸಿದ್ದರು. ಈ ಸಂದರ್ಭದಲ್ಲಿ ಮಲವಂತಿಗೆ ಗ್ರಾಮದ ತೀಕ್ಷಿತ್ ಕೆ. ಕಲ್ಬೆಟ್ಟು ರವರು ಗ್ರಾಮದ ಅಭಿವೃದ್ಧಿಯ ಉದ್ದೇಶದಿಂದ ತಮ್ಮ ಅಭಿಪ್ರಾಯವನ್ನು ಸಭೆಯಲ್ಲಿ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಕಜಕ್ಕೆ ಮಲವಂತಿಗೆ ಇಲ್ಲಿ ಸುಮಾರು 100 ಕ್ಕೂ ಅಧಿಕ ವಿದ್ಯಾರ್ಥಿಗಳು

ವಿದ್ಯಾಭ್ಯಾಸವನ್ನು ಮಾಡುತ್ತಿದ್ದು ಅದಲ್ಲದೆ ವಿವಿಧ ರೀತಿಯ ಚಟುವಟಿಕೆಯಲ್ಲಿ ಹಾಗೂ ಉತ್ತಮ ಶಾಲೆ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆದುಕೊಂಡ ವಿದ್ಯಾಸಂಸ್ಥೆಯಾಗಿದ್ದು, ಅದಲ್ಲದೆ ಮಲವಂತಿಗೆ ಮತ್ತು ಮಿತ್ತಬಾಗಿಲು ಕೇವಲ 2 ಗ್ರಾಮದ ವಿದ್ಯಾರ್ಥಿಗಳು ಸರಕಾರಿ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದು, ಇಲ್ಲಿಯವರೆಗೆ ರಸ್ತೆ ಇದ್ದರೂ ಕೂಡ ಮೂಲಭೂತ ಸೌಕರ್ಯದ ಕೊರತೆಯಿಂದ ಸುಮಾರು 2.5 ಕಿ.ಮೀ ನಡೆದುಕೊಂಡು ಹೋಗುವ ಪರಿಸ್ಥಿತಿ ಸುಮಾರು ವರ್ಷಗಳಿಂದ ನಡೆಯುತ್ತಿತ್ತು, ಸುಮಾರು 250 ಕ್ಕೂ ಅಧಿಕ ಮನೆಗಳಿದ್ದು ಅಲ್ಲಿಯ ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮಸ್ಥರಿಗೆ ತುಂಬಾ ಅನುಕೂಲ ಆಗುವಂತೆ ಕೆಎಸ್ಸಾರ್ಟಿಸಿ ಪುತ್ತೂರು ವಿಭಾಗಕ್ಕೆ ಹಾಗೂ ಧರ್ಮಸ್ಥಳ ವಿಭಾಗಕ್ಕೆ ಹಾಗೂ ಶಾಸಕರಿಗೆ ಜು. 1 ರಂದು ಕೆಎಸ್ಸಾರ್ಟಿಸಿ ಜನಸ್ಪಂದನಾ ಸಭೆಯ ಮೂಲಕ ಗ್ರಾಮಸ್ಥರ ಪರವಾಗಿ ನೀಡಿದ ಮನವಿಗೆ ಸ್ಪಂದಿಸಿ. ಬಸ್ ಸಂಚಾರ ವಿಸ್ತರಣೆ ಅನುಕೂಲವಾಯಿತು.


ಇಂದು(ಅ.22) ಬೆಳಗ್ಗೆ 7.30ಕ್ಕೆ ಎರಡು ಕೆಎಸ್ಸಾರ್ಟಿಸಿ ಬಸ್ ಗಳನ್ನು ದಿಡುಪೆಯಿಂದ ಕಜಕ್ಕೆ ಭಾಗಕ್ಕೆ ವಿಶೇಷ ರೀತಿಯಲ್ಲಿ ಪುಟ್ಟ ವಿದ್ಯಾರ್ಥಿಗಳೊಂದಿಗೆ ಗ್ರಾಮಸ್ಥರು ಸೇರಿ ಹೂವಿನ ಅಲಂಕಾರ ಪುಷ್ಪಾರ್ಚನೆ ಹಾಗೂ ಸಿಹಿ ತಿಂಡಿ ಹಂಚಿ ಸ್ವಾಗತಿಸುವ ಮೂಲಕ ಚಾಲನೆ ನೀಡಿದರು.

ಕರ್ನಾಟಕ ಸಾರಿಗೆ ವ್ಯವಸ್ಥೆಯ ಸಿಬ್ಬಂದಿ ವರ್ಗದವರಾದ ನಾರಾಯಣ ಪೂಜಾರಿ ಮುಂಡಾಜೆ ಹಾಗೂ ಚಾಲಕರು ಮತ್ತು ನಿರ್ವಾಹಕರಾದ ವಿನಾಯಚಂದ್ರ, ಕರುಣಾಕರ, ಮತ್ತು ದಯಾನಂದ ಉಪಸ್ಥಿತರಿದ್ದರು.

ಬಂಗಾಡಿ ಸಿ.ಎ ಬ್ಯಾಂಕ್ ನಿರ್ದೇಶಕರಾದ ಕೇಶವ ಎಂ.ಕೆ, ಹಾಲು ಉತ್ಪಾದಕರ ಸಹಕಾರಿ ಸಂಘ ಮಲವಂತಿಗೆ ಅಧ್ಯಕ್ಷ ನಾರಾಯಣ ಗೌಡ, ವಿದ್ಯಾಗಣಪತಿ ಸೇವಾ ಸಮಿತಿ ಅಧ್ಯಕ್ಷ ತೀಕ್ಷಿತ್ ಕೆ.ಕಲ್ಬೆಟ್ಟು, ಶ್ರೀ ಸಾರ್ವಜನಿಕ ಗಣೇಶೋತ್ಸವ ಟ್ರಸ್ಟ್ ನ ಅಧ್ಯಕ್ಷ ಸಂತೋಷ್ ಪೂಜಾರಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಜಕೆಯ ಶಿಕ್ಷಕರಾದ ರಂಗನಾಥ ಮತ್ತು ಪರಮೇಶ್ವರ್, ಎಸ್.ಡಿ.ಎಂ.ಸಿ ಅಧ್ಯಕ್ಷ ಶೇಖರ ಗೌಡ ಪೊದ್ಕೆತರು, ಹಾಗೂ ಗ್ರಾಮಸ್ಥರಾದ ಮಧುಸೋದನ್ ಮಲ್ಲ, ಶೇಕರ ಗೌಡ ಹೊಳೆಕೆರೆ, ರಾಧಾಕೃಷ್ಣ ಗೌಡ ಮಜಲು, ರಮೇಶ್ ಗೌಡ ವಿದ್ಯಾನಗರ, ಸಚಿನ್ ಗೌಡ ಬದ್ಲಾಯಿ, ಹರಿ ಭಟ್, ಕಾರ್ಯದರ್ಶಿ ಗೋಪಾಲಕೃಷ್ಣ ದೇವಸ್ಥಾನ ಟ್ರಸ್ಟ್ ಸಂಜೀವ ಗೌಡ ಪುನ್ಕೆದಡಿ, ರಮೇಶ್ ಗೌಡ, ಸಂಪತ್ ಪೂಜಾರಿ ಕಜಕ್ಕೆ, ಸಾಗರ್ ಅಡ್ಡಕೊಡಂಗೆ, ರಾಜೇಶ್ ಗೌಡ ಬರ್ಕಲಟ್ಟು, ಗ್ರಾಮಸ್ಥರು ಹಾಗೂ ಕಜಕ್ಕೆ ಶಾಲೆ ಪುಟಾಣಿಗಳು,ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಮುಖ್ಯಸ್ಥ ಉಮೇಶ್ ಗೌಡ ಸ್ವಾಗತಿಸಿ, ಶ್ರೀ ವಿದ್ಯಾಗಣಪತಿ ಸೇವೆ ಸಮಿತಿಯ ಕಾರ್ಯದರ್ಶಿ ಜಯಂತ ಹೆಗ್ಡೆ ವಂದಿಸಿದರು.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಪಾಲೇದು ಸ. ಹಿ. ಪ್ರಾ. ಶಾಲೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ

Suddi Udaya

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸೈನ್ಸ್ ಒಲಿಂಪಿಯಾಡ್ ಫೌಂಡೇಶನ್ – 2ನೇ ಹಂತದ ಫಲಿತಾಂಶ ಅಮೋಘ ದಾಖಲೆ: ವಿದ್ಯಾರ್ಥಿಗಳ ಪರಿಶ್ರಮ,ಶಿಕ್ಷಕರ ಮಾರ್ಗದರ್ಶನ,ಪೋಷಕರ ಬೆಂಬಲದಿಂದ ಈ ಸಾಧನೆ: ಸುಮಂತ್ ಕುಮಾರ್ ಜೈನ್

Suddi Udaya

ಶ್ರೀ ಧ.ಮ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕಪುಚಿನ್ ಕೃಷಿಕಾ ಸೇವಾ ಕೇಂದ್ರ ಮತ್ತು ವಿಮುಕ್ತಿ ಸ್ವ ಸಹಾಯ ಸಂಘಗಳ ವತಿಯಿಂದ ವಿದ್ಯಾಸ್ನೇಹಿ ಬಡ್ಡಿರಹಿತ ಶಿಕ್ಷಣ ಸಾಲ ವಿತರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya
error: Content is protected !!