September 6, 2026
Uncategorized

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

ಮಲವಂತಿಗೆ: ಇಲ್ಲಿಯ ಮಲ್ಲ, ನಂದಿಕಾಡು, ಆರ್ನಂದಿಕಾಡು ಪರಿಸರದಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳು ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ಕೃಷಿಯನ್ನು ನಾಶಪಡಿಸಿದೆ. ಸದಾಶಿವ ಮಲೆಕುಡಿಯ ತೋಟದಲ್ಲಿ ಸುಮಾರು ೧೫೦ ಅಡಿಕೆ ಮರ, ತೆಂಗಿನ ಮರಗಳು ಹಾಗೂ ಇತರ ಮರಗಳನ್ನೂ ನೆಲಕ್ಕೆ ಉರುಳಿಸಿದೆ. ಇವರಿಗೆ ಸೇರಿದ ಒಂದುವರೆ ಎಕ್ರೆ ಗದ್ದೆಯಲ್ಲಿನ ಭತ್ತದ ಕೃಷಿಯನ್ನು ಸಂಪೂರ್ಣ ನಾಶಪಡಿಸಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಮನೆಗಳ ಸಮೀಪದಲ್ಲಯೇ ಕಾಡಾನೆಗಳು ಓಡಾಟ ನಡೆಸಿದ್ದು ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಆರಕ್ಕೂ ಹೆಚ್ಚು ಆನೆಗಳು ತಂಡದಲ್ಲಿದ್ದು, ಇದೇ ಪರಿಸರದ ಅರಣ್ಯದಲ್ಲಿ ಬೀಡು ಬಿಟ್ಟಿರುವ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ ಹಿಂದೆ ಆರಕ್ಕೂ ಹೆಚ್ಚು ಆನೆಗಳಿದ್ದ ಹಿಂಡೊಂದು ಚಾರ್ಮಾಡಿಯಲ್ಲಿ ಕೃಷಿಗೆ ಹಾನಿಯುಂಟು ಮಾಡಿತ್ತು ಇದೇ ಆನೆಗಳು ಇದೀಗ ಮಲವಂತಿಗೆ ಪ್ರದೇಶಕ್ಕೆ ಬಂದಿರಬಹುದು ಎಂದು ಅನುಮಾನಿಸಲಾಗಿದೆ.

Related posts

ಧರ್ಮಸ್ಥಳ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ: ಕರ್ತವ್ಯ ನಿಷ್ಠೆಯೇ ದೇಶ ಸೇವೆ: ಕರ್ನಲ್ ಎಂ.ಜಿ ಜಯರಾಮ್

Suddi Udaya

ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿಯ ಭೇಟಿ

Suddi Udaya

ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ವಿಜಯಾ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ, ಸಮ್ಮೇಳನ ಸಂಯೋಜನ ಸಮಿತಿ ಸರಕಾರಿ ಪ್ರೌಢಶಾಲೆ ಮತ್ತು ಸರಕಾರಿ ಪದವಿಪೂರ್ವ ಕಾಲೇಜು, ಕೊಯ್ಯರು ಇದರಸಂಯುಕ್ತ ಆಶ್ರಯ: . ಕೊಯ್ಯೂರಿನಲ್ಲಿ ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Suddi Udaya

ಪಟ್ರಮೆ: ಬಲ್ಲಿದಡ್ಡ ನಿವಾಸಿ ಸುರೇಶ್ ಗೌಡ ಆತ್ಮಹತ್ಯೆ ಶಂಕೆ

Suddi Udaya
error: Content is protected !!