23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆ

ಪುತ್ತೂರು : ವಿದ್ಯಾಮಾತಾ ಅಕಾಡೆಮಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಗೆ ಪೂರ್ವ ತಯಾರಿ ತರಬೇತಿಯನ್ನು ಪಡೆದಕೊಂಡ ಬಸವರಾಜ್ ಇವರು ಕರ್ನಾಟಕ ರಾಜ್ಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಯ ನೇಮಕಾತಿ ಪ್ರಕ್ರಿಯೆಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗಿ ಇದೀಗ ನೇಮಕಾತಿಗೊಂಡಿರುತ್ತಾರೆ.


ಮೂಲತಃ ಬೆಳಗಾವಿ ಜಿಲ್ಲೆಯ ಕಾಗವಡ ತಾಲೂಕಿನ ಕಾತ್ರಾಳ್ ಗ್ರಾಮದ ನಿವಾಸಿಗಳಾದ ಶಂಕರ ಮತ್ತು ಯಮುನವ್ವ ದಂಪತಿಯ ಪುತ್ರ ಬಸವರಾಜ ಮುದವಿ ರವರು ಪ್ರಸ್ತುತ ಸುಳ್ಯ ಆರಕ್ಷಕ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಮುದವಿಯವರು ಈ ಹಿಂದೆ ಬೆಳ್ಳಾರೆ ಆರಕ್ಷಕ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿದ್ದುಕೊಂಡು ಉನ್ನತ ಸ್ಥಾನಕ್ಕೇರಲು ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಕರ್ತವ್ಯದ ಒತ್ತಡದ ನಡುವೆಯೂ ಅಭ್ಯಾಸ ನಡೆಸಿ ಕಡೆಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆಗೊಂಡು ವಿದ್ಯಾಮಾತಾ ಅಕಾಡೆಮಿಯ ಕೀರ್ತಿಯನ್ನು ಉನ್ನತ ಸ್ಥಾನಕ್ಕೇರಿಸಿದ್ದಾರೆ, ಬಸವರಾಜ ಮುದವಿಯವರ ಈ ಸಾಧನೆಗೆ ಪ್ರಸ್ತುತ ಪುತ್ತೂರು ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಗಿರುವ ಆಂಜನೇಯ ರೆಡ್ಡಿಯವರ ಮಾರ್ಗದರ್ಶನ ಸ್ಮರಣಿಯವಾಗಿದ್ದು, ಹೆತ್ತವರಿಗೂ ಊರಿಗೂ ಇವರ ಅವಿಸ್ಮರಣೀಯವಾದ ಯಶಸ್ಸು ಗೌರವವನ್ನು ತಂದಿದ್ದು ಇನ್ನಷ್ಟು ಆಕಾಂಕ್ಷಿಗಳಿಗೆ ದಾರಿದೀಪವಾಗಿರುವ ವಿದ್ಯಾಮಾತಾ ಅಕಾಡೆಮಿಯ ಮುಂದಿನ ತರಬೇತಿಗಳಿಗೆ ಇನ್ನಷ್ಟು ಬಲ ಬಂದಿದೆ.

Related posts

ವೇಣೂರು ಸ. ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

Suddi Udaya

ಎ.17 : ಬೆಳ್ತಂಗಡಿಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆ‌ರ್ ಮತಪ್ರಚಾರ:ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯದ ಮಹಾಸಭೆ

Suddi Udaya

ಬೆಳ್ತಂಗಡಿ : ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಅರಸಿನಮಕ್ಕಿ: ಕುಡಿಯುವ ನೀರಿನ ಸ್ಥಾವರ ಉದ್ಘಾಟನೆ

Suddi Udaya
error: Content is protected !!