23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಉಜಿರೆ: ಬದುಕು ಉತ್ತಮವಾಗಿ ರೂಪುಗೊಳ್ಳಲು ಆತ್ಮವಿಶ್ವಾಸದ ಜೊತೆಗೆ ಶಿಸ್ತು ಇರಬೇಕು. ಶಿಸ್ತು ಶಿಕ್ಷಣದ ಅವಿಭಾಜ್ಯ ಅಂಗ ಎಂದು ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಬಿ. ಸೋಮಶೇಖರ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.


ಇಲ್ಲಿನ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅ. 21ರಂದು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


“ಬದುಕನ್ನು ಹೇಗೆ ಮುಂದೆ ತೆಗೆದುಕೊಂಡು ಹೋಗಬೇಕು ಎಂಬುದನ್ನು ನಾವೇ ನಿರ್ಧರಿಸಬೇಕು. ಬದುಕು ನಮಗೆ ಹೆತ್ತವರು ನೀಡಿದ ಕೊಡುಗೆ. ಬದುಕು ಸಾರ್ಥಕವಾಗಬೇಕಾದರೆ ನಾವು ಏನನ್ನಾದರೂ ಸಾಧಿಸಬೇಕು. ಬದುಕು ಸಾರ್ಥಕವಾಗಬೇಕಾದರೆ ನಿರ್ದಿಷ್ಟ ಗುರಿ ಇರಬೇಕು. ಗುರಿ ತಲುಪಲು ಅಚಲವಾದ ಆತ್ಮವಿಶ್ವಾಸ ಅತೀ ಅಗತ್ಯ” ಎಂದು ಅವರು ಹೇಳಿದರು.

“ಉತ್ತಮ ಆರೋಗ್ಯಕ್ಕಾಗಿ ದುಶ್ಚಟಗಳಿಂದ ದೂರವಿರಬೇಕು. ದುಶ್ಚಟಗಳಿಂದ ದೂರ ಇರಲು ಉತ್ತಮ ಗೆಳೆಯರ ಬಳಗ ಇಟ್ಟುಕೊಳ್ಳಿ, ಸೋತಾಗ ಕುಗ್ಗದಿರಿ, ಗೆದ್ದಾಗ ಹಿಗ್ಗದಿರಿ, ತಿಳಿಯಾದ ನೀರಿನಂತೆ ಇರಬೇಕು. ಸಾಧ್ಯವಾದಷ್ಟು ಓದುವ ಹವ್ಯಾಸ ಬೆಳೆಸಿಕೊಂಡು ದೇಶದ ಸತ್ಪ್ರಜೆಗಳಾಗಿ ಬಾಳಿ” ಎಂದು ಅವರು ಹಾರೈಸಿದರು.


ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಗೆ ಶಿಸ್ತು, ಸ್ವಚ್ಛತೆ ಪಾಲನೆ ಮಾಡುವ ಕುರಿತು ಹಾಗೂ ದುಶ್ಚಟಗಳಿಂದ ದೂರ ಇರುವುದಾಗಿ ದೇವರ ಮೇಲೆ ಪ್ರಮಾಣ ವಚನ ಬೋಧಿಸಲಾಯಿತು.
ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು. ಕಿರಿಯ ತರಬೇತಿ ಅಧಿಕಾರಿ ಸಂಧ್ಯಾ ಕಾರ್ಯಕ್ರಮ ನಿರ್ವಹಿಸಿದರು

Related posts

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ ‘ಆರೋಹಣಮ್

Suddi Udaya

ಮಲೆಂಗಲ್ಲು ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭಾ ಕಾರ್ಯಕ್ರಮ: ಶ್ರದ್ಧಾ ಭಕ್ತಿಯಿಂದ ಭಗವಂತನನ್ನು ಆರಾಧಿಸಿ – ಶ್ರೀ ಡಾ.ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು

Suddi Udaya

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಪೂಜಾರಿ ಲಾಯಿಲರವರಿಗೆ ಸನ್ಮಾನ

Suddi Udaya
error: Content is protected !!