September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಉಜಿರೆ: ಬದುಕು ಉತ್ತಮವಾಗಿ ರೂಪುಗೊಳ್ಳಲು ಆತ್ಮವಿಶ್ವಾಸದ ಜೊತೆಗೆ ಶಿಸ್ತು ಇರಬೇಕು. ಶಿಸ್ತು ಶಿಕ್ಷಣದ ಅವಿಭಾಜ್ಯ ಅಂಗ ಎಂದು ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಬಿ. ಸೋಮಶೇಖರ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.


ಇಲ್ಲಿನ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅ. 21ರಂದು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


“ಬದುಕನ್ನು ಹೇಗೆ ಮುಂದೆ ತೆಗೆದುಕೊಂಡು ಹೋಗಬೇಕು ಎಂಬುದನ್ನು ನಾವೇ ನಿರ್ಧರಿಸಬೇಕು. ಬದುಕು ನಮಗೆ ಹೆತ್ತವರು ನೀಡಿದ ಕೊಡುಗೆ. ಬದುಕು ಸಾರ್ಥಕವಾಗಬೇಕಾದರೆ ನಾವು ಏನನ್ನಾದರೂ ಸಾಧಿಸಬೇಕು. ಬದುಕು ಸಾರ್ಥಕವಾಗಬೇಕಾದರೆ ನಿರ್ದಿಷ್ಟ ಗುರಿ ಇರಬೇಕು. ಗುರಿ ತಲುಪಲು ಅಚಲವಾದ ಆತ್ಮವಿಶ್ವಾಸ ಅತೀ ಅಗತ್ಯ” ಎಂದು ಅವರು ಹೇಳಿದರು.

“ಉತ್ತಮ ಆರೋಗ್ಯಕ್ಕಾಗಿ ದುಶ್ಚಟಗಳಿಂದ ದೂರವಿರಬೇಕು. ದುಶ್ಚಟಗಳಿಂದ ದೂರ ಇರಲು ಉತ್ತಮ ಗೆಳೆಯರ ಬಳಗ ಇಟ್ಟುಕೊಳ್ಳಿ, ಸೋತಾಗ ಕುಗ್ಗದಿರಿ, ಗೆದ್ದಾಗ ಹಿಗ್ಗದಿರಿ, ತಿಳಿಯಾದ ನೀರಿನಂತೆ ಇರಬೇಕು. ಸಾಧ್ಯವಾದಷ್ಟು ಓದುವ ಹವ್ಯಾಸ ಬೆಳೆಸಿಕೊಂಡು ದೇಶದ ಸತ್ಪ್ರಜೆಗಳಾಗಿ ಬಾಳಿ” ಎಂದು ಅವರು ಹಾರೈಸಿದರು.


ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಗೆ ಶಿಸ್ತು, ಸ್ವಚ್ಛತೆ ಪಾಲನೆ ಮಾಡುವ ಕುರಿತು ಹಾಗೂ ದುಶ್ಚಟಗಳಿಂದ ದೂರ ಇರುವುದಾಗಿ ದೇವರ ಮೇಲೆ ಪ್ರಮಾಣ ವಚನ ಬೋಧಿಸಲಾಯಿತು.
ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು. ಕಿರಿಯ ತರಬೇತಿ ಅಧಿಕಾರಿ ಸಂಧ್ಯಾ ಕಾರ್ಯಕ್ರಮ ನಿರ್ವಹಿಸಿದರು

Related posts

ಬೆಳ್ತಂಗಡಿ:ಸಹಕಾರಿಗಳ ನಡಿಗೆ ಧರ್ಮಸ್ಥಳ ಕಡೆಗೆ ಪೂರ್ವಭಾವಿ ಸಭೆ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಐ.ಟಿ.ಐ ಹಾಗೂ ಬಿ.ಎಡ್ – ಡಿ.ಎಡ್. ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಅ.28-29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನದ” ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ , ಕಬ್ಸ್ ಮತ್ತು ಬುಲ್ ಬುಲ್ಬಸ್ ಹಾಗೂ ಬನ್ನಿಸ್ ವತಿಯಿಂದ ಧ್ವಜ ದಿನಾಚರಣೆ

Suddi Udaya
error: Content is protected !!