25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ಎನ್ ಎಸ್ ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

ನಾರಾವಿ: “ಪರಿಸರವನ್ನ ಸ್ವಚ್ಛಗೊಳಿಸುವುದು ಮಾತ್ರ ಎನ್ ಎಸ್ ಎಸ್ ನ ಕೆಲಸವಲ್ಲ. ಮನುಷ್ಯನ ಮಾನಸಿಕ ಕೊಳೆಯನ್ನು ತೊಡೆದು ಅರಿವನ್ನು ಮೂಡಿಸಿ ಮನೋಬಲವನ್ನು ನೀಡುವುದೇ ಎನ್ ಎಸ್ ಎಸ್. ವಿದ್ಯಾರ್ಥಿಗಳಲ್ಲಿ ತನ್ನತನವನ್ನು ಬೆಳೆಸಿ ಪ್ರೇರೇಪಿಸಿ ಸುಂದರ ವ್ಯಕ್ತಿತ್ವವನ್ನು ನೀಡುವ ಕಲೆಗಾರಿಕೆ ಇರುವ ಏಕೈಕ ಸಂಸ್ಥೆ ಯನ್ ಯಸ್ ಯಸ್ ” ಎಂದು ಶ್ರೀ ಧವಳ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಪ್ರೊ. ಸಂತೋಷ್ ಶೆಟ್ಟಿ ಅಭಿಪ್ರಾಯಪಟ್ಟರು . ಅವರು ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ 2024-25ನೇ ಸಾಲಿನ ಕಾರ್ಯಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ವಂ.ಡಾ.ಆಲ್ವಿನ್ ಸೆರಾವೋ ಅವರು “ಎನ್ಎಸ್ಎಸ್ ನಲ್ಲಿ ಪರಿಪೂರ್ಣವಾಗಿ ತೊಡಗಿಸಿಕೊಂಡವರಲ್ಲಿ ಭೇದಭಾವ ಇರೋದಿಲ್ಲ. ನೈತಿಕತೆ ಹಾಗೂ ಆರೋಗ್ಯ ಪೂರ್ಣ ಬದುಕು ಅವರಿಗೆ ಒಲಿಯುತ್ತದೆ” ಎಂದರು.

ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ದಿನೇಶ್ ಬಿ.ಕೆ ಬಳಂಜ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯದರ್ಶಿ ಕುಮಾರಿ ರಶ್ವಿತಾ ಧನ್ಯವಾದವಿತ್ತರು. ಸ್ವಯಂಸೇವಕಿ ಕು.ಅನ್ವಿತಾ ರಾವ್ ಕಾರ್ಯಕ್ರಮವನ್ನು ನಿರೂಪಿಸಿದರು.
ಉಪಪ್ರಾಂಶುಪಾಲರಾದ ಸಂತೋಷ್ ಸಲ್ಡಾನ, ಉಪನ್ಯಾಸಕರಾದ ಅವಿಲ್ ಮೋರಸ್, ಸಂತೋಷ್ ಈದು, ಅವಿನಾಶ್ ಲೋಬೋ, ಶ್ರೀಮತಿ ಅನಿತಾ ಡಿಸೋಜಾ ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ನಡ- ಕನ್ಯಾಡಿ ಗ್ರಾಮಗಳಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ನಿಡ್ಲೆ: ಕಜೆ ನಿವಾಸಿ ಸರಸ್ವತಿ ನಿಧನ

Suddi Udaya

ಮರೋಡಿ: ಮಾವಿನಕಟ್ಟೆಯಲ್ಲಿ ಭಾರೀ ಮಳೆಗೆ ಭೂಕುಸಿತ

Suddi Udaya

ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ

Suddi Udaya
error: Content is protected !!