25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಉಜಿರೆ: ಬದುಕು ಉತ್ತಮವಾಗಿ ರೂಪುಗೊಳ್ಳಲು ಆತ್ಮವಿಶ್ವಾಸದ ಜೊತೆಗೆ ಶಿಸ್ತು ಇರಬೇಕು. ಶಿಸ್ತು ಶಿಕ್ಷಣದ ಅವಿಭಾಜ್ಯ ಅಂಗ ಎಂದು ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಬಿ. ಸೋಮಶೇಖರ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.


ಇಲ್ಲಿನ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅ. 21ರಂದು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


“ಬದುಕನ್ನು ಹೇಗೆ ಮುಂದೆ ತೆಗೆದುಕೊಂಡು ಹೋಗಬೇಕು ಎಂಬುದನ್ನು ನಾವೇ ನಿರ್ಧರಿಸಬೇಕು. ಬದುಕು ನಮಗೆ ಹೆತ್ತವರು ನೀಡಿದ ಕೊಡುಗೆ. ಬದುಕು ಸಾರ್ಥಕವಾಗಬೇಕಾದರೆ ನಾವು ಏನನ್ನಾದರೂ ಸಾಧಿಸಬೇಕು. ಬದುಕು ಸಾರ್ಥಕವಾಗಬೇಕಾದರೆ ನಿರ್ದಿಷ್ಟ ಗುರಿ ಇರಬೇಕು. ಗುರಿ ತಲುಪಲು ಅಚಲವಾದ ಆತ್ಮವಿಶ್ವಾಸ ಅತೀ ಅಗತ್ಯ” ಎಂದು ಅವರು ಹೇಳಿದರು.

“ಉತ್ತಮ ಆರೋಗ್ಯಕ್ಕಾಗಿ ದುಶ್ಚಟಗಳಿಂದ ದೂರವಿರಬೇಕು. ದುಶ್ಚಟಗಳಿಂದ ದೂರ ಇರಲು ಉತ್ತಮ ಗೆಳೆಯರ ಬಳಗ ಇಟ್ಟುಕೊಳ್ಳಿ, ಸೋತಾಗ ಕುಗ್ಗದಿರಿ, ಗೆದ್ದಾಗ ಹಿಗ್ಗದಿರಿ, ತಿಳಿಯಾದ ನೀರಿನಂತೆ ಇರಬೇಕು. ಸಾಧ್ಯವಾದಷ್ಟು ಓದುವ ಹವ್ಯಾಸ ಬೆಳೆಸಿಕೊಂಡು ದೇಶದ ಸತ್ಪ್ರಜೆಗಳಾಗಿ ಬಾಳಿ” ಎಂದು ಅವರು ಹಾರೈಸಿದರು.


ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಗೆ ಶಿಸ್ತು, ಸ್ವಚ್ಛತೆ ಪಾಲನೆ ಮಾಡುವ ಕುರಿತು ಹಾಗೂ ದುಶ್ಚಟಗಳಿಂದ ದೂರ ಇರುವುದಾಗಿ ದೇವರ ಮೇಲೆ ಪ್ರಮಾಣ ವಚನ ಬೋಧಿಸಲಾಯಿತು.
ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು. ಕಿರಿಯ ತರಬೇತಿ ಅಧಿಕಾರಿ ಸಂಧ್ಯಾ ಕಾರ್ಯಕ್ರಮ ನಿರ್ವಹಿಸಿದರು

Related posts

ಕೊಕ್ಕಡದಲ್ಲಿ ವ್ಯಾಪಾರ ಆಭಿವೃದ್ಧಿ ಯೋಜನೆಯ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ-200 ರಲ್ಲಿ ಸ್ವೀಪ್ ಸಮಿತಿಯಿಂದ ತಾಲೂಕಿನ 241 ಬಿಎಲ್ ಒ ಗಳಿಗೆ ತರಬೇತಿ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾ. ಪಂ. ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ರಿಂದ ದೂರು

Suddi Udaya

ಉಜಿರೆಯಲ್ಲಿ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

Suddi Udaya

ಕೊಕ್ಕಡ ಜಂಕ್ಷನ್ ಹದಗೆಟ್ಟ ರಸ್ತೆ: ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯ ಬಾಳೆ ಗಿಡ ನೆಟ್ಟು ಎಚ್ಚರಿಕೆ

Suddi Udaya
error: Content is protected !!