23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಉಜಿರೆ: ಬದುಕು ಉತ್ತಮವಾಗಿ ರೂಪುಗೊಳ್ಳಲು ಆತ್ಮವಿಶ್ವಾಸದ ಜೊತೆಗೆ ಶಿಸ್ತು ಇರಬೇಕು. ಶಿಸ್ತು ಶಿಕ್ಷಣದ ಅವಿಭಾಜ್ಯ ಅಂಗ ಎಂದು ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಬಿ. ಸೋಮಶೇಖರ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.


ಇಲ್ಲಿನ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅ. 21ರಂದು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


“ಬದುಕನ್ನು ಹೇಗೆ ಮುಂದೆ ತೆಗೆದುಕೊಂಡು ಹೋಗಬೇಕು ಎಂಬುದನ್ನು ನಾವೇ ನಿರ್ಧರಿಸಬೇಕು. ಬದುಕು ನಮಗೆ ಹೆತ್ತವರು ನೀಡಿದ ಕೊಡುಗೆ. ಬದುಕು ಸಾರ್ಥಕವಾಗಬೇಕಾದರೆ ನಾವು ಏನನ್ನಾದರೂ ಸಾಧಿಸಬೇಕು. ಬದುಕು ಸಾರ್ಥಕವಾಗಬೇಕಾದರೆ ನಿರ್ದಿಷ್ಟ ಗುರಿ ಇರಬೇಕು. ಗುರಿ ತಲುಪಲು ಅಚಲವಾದ ಆತ್ಮವಿಶ್ವಾಸ ಅತೀ ಅಗತ್ಯ” ಎಂದು ಅವರು ಹೇಳಿದರು.

“ಉತ್ತಮ ಆರೋಗ್ಯಕ್ಕಾಗಿ ದುಶ್ಚಟಗಳಿಂದ ದೂರವಿರಬೇಕು. ದುಶ್ಚಟಗಳಿಂದ ದೂರ ಇರಲು ಉತ್ತಮ ಗೆಳೆಯರ ಬಳಗ ಇಟ್ಟುಕೊಳ್ಳಿ, ಸೋತಾಗ ಕುಗ್ಗದಿರಿ, ಗೆದ್ದಾಗ ಹಿಗ್ಗದಿರಿ, ತಿಳಿಯಾದ ನೀರಿನಂತೆ ಇರಬೇಕು. ಸಾಧ್ಯವಾದಷ್ಟು ಓದುವ ಹವ್ಯಾಸ ಬೆಳೆಸಿಕೊಂಡು ದೇಶದ ಸತ್ಪ್ರಜೆಗಳಾಗಿ ಬಾಳಿ” ಎಂದು ಅವರು ಹಾರೈಸಿದರು.


ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಗೆ ಶಿಸ್ತು, ಸ್ವಚ್ಛತೆ ಪಾಲನೆ ಮಾಡುವ ಕುರಿತು ಹಾಗೂ ದುಶ್ಚಟಗಳಿಂದ ದೂರ ಇರುವುದಾಗಿ ದೇವರ ಮೇಲೆ ಪ್ರಮಾಣ ವಚನ ಬೋಧಿಸಲಾಯಿತು.
ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು. ಕಿರಿಯ ತರಬೇತಿ ಅಧಿಕಾರಿ ಸಂಧ್ಯಾ ಕಾರ್ಯಕ್ರಮ ನಿರ್ವಹಿಸಿದರು

Related posts

ಗುಡ್ ಫ್ಯೂಚರ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಸದಸ್ಯರ ಭೇಟಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರು ಸೇರಿ ಮೃತದೇಹ ಹೂತು ಹಾಕಿರುವ ಆರೋಪ ಪ್ರಕರಣ : ಭಾಸ್ಕರ್ ನಾಯ್ಕ್ ರವರಿಂದ ಎಸ್.ಐ.ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಜಯಂತ್ ಟಿ ಹಾಜರು: ಒಳದಾರಿಯಲ್ಲಿ ಓಡಿ ಹೋಗಿ ಕಚೇರಿ ಪ್ರವೇಶ

Suddi Udaya

ಧರ್ಮಸ್ಥಳ : ಮುಳಿಕ್ಕಾರು ನಿವಾಸಿ ವಿನುತ ನೇಣುಬಿಗಿದು ಆತ್ಮಹತ್ಯೆ

Suddi Udaya

ಅಳದಂಗಡಿ: ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿಯ ಹಿರಿಯ ಕಾರ್ಯಕರ್ತ ಪೂವಪ್ಪ ಮಡಿವಾಳ ಸನ್ಮಾನ

Suddi Udaya
error: Content is protected !!