22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಉಜಿರೆ: ಬದುಕು ಉತ್ತಮವಾಗಿ ರೂಪುಗೊಳ್ಳಲು ಆತ್ಮವಿಶ್ವಾಸದ ಜೊತೆಗೆ ಶಿಸ್ತು ಇರಬೇಕು. ಶಿಸ್ತು ಶಿಕ್ಷಣದ ಅವಿಭಾಜ್ಯ ಅಂಗ ಎಂದು ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಬಿ. ಸೋಮಶೇಖರ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.


ಇಲ್ಲಿನ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅ. 21ರಂದು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


“ಬದುಕನ್ನು ಹೇಗೆ ಮುಂದೆ ತೆಗೆದುಕೊಂಡು ಹೋಗಬೇಕು ಎಂಬುದನ್ನು ನಾವೇ ನಿರ್ಧರಿಸಬೇಕು. ಬದುಕು ನಮಗೆ ಹೆತ್ತವರು ನೀಡಿದ ಕೊಡುಗೆ. ಬದುಕು ಸಾರ್ಥಕವಾಗಬೇಕಾದರೆ ನಾವು ಏನನ್ನಾದರೂ ಸಾಧಿಸಬೇಕು. ಬದುಕು ಸಾರ್ಥಕವಾಗಬೇಕಾದರೆ ನಿರ್ದಿಷ್ಟ ಗುರಿ ಇರಬೇಕು. ಗುರಿ ತಲುಪಲು ಅಚಲವಾದ ಆತ್ಮವಿಶ್ವಾಸ ಅತೀ ಅಗತ್ಯ” ಎಂದು ಅವರು ಹೇಳಿದರು.

“ಉತ್ತಮ ಆರೋಗ್ಯಕ್ಕಾಗಿ ದುಶ್ಚಟಗಳಿಂದ ದೂರವಿರಬೇಕು. ದುಶ್ಚಟಗಳಿಂದ ದೂರ ಇರಲು ಉತ್ತಮ ಗೆಳೆಯರ ಬಳಗ ಇಟ್ಟುಕೊಳ್ಳಿ, ಸೋತಾಗ ಕುಗ್ಗದಿರಿ, ಗೆದ್ದಾಗ ಹಿಗ್ಗದಿರಿ, ತಿಳಿಯಾದ ನೀರಿನಂತೆ ಇರಬೇಕು. ಸಾಧ್ಯವಾದಷ್ಟು ಓದುವ ಹವ್ಯಾಸ ಬೆಳೆಸಿಕೊಂಡು ದೇಶದ ಸತ್ಪ್ರಜೆಗಳಾಗಿ ಬಾಳಿ” ಎಂದು ಅವರು ಹಾರೈಸಿದರು.


ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಗೆ ಶಿಸ್ತು, ಸ್ವಚ್ಛತೆ ಪಾಲನೆ ಮಾಡುವ ಕುರಿತು ಹಾಗೂ ದುಶ್ಚಟಗಳಿಂದ ದೂರ ಇರುವುದಾಗಿ ದೇವರ ಮೇಲೆ ಪ್ರಮಾಣ ವಚನ ಬೋಧಿಸಲಾಯಿತು.
ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು. ಕಿರಿಯ ತರಬೇತಿ ಅಧಿಕಾರಿ ಸಂಧ್ಯಾ ಕಾರ್ಯಕ್ರಮ ನಿರ್ವಹಿಸಿದರು

Related posts

ವ್ಯವಹಾರ ಆಡಳಿತ ನಿರ್ವಹಣೆ ಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ವೈಜ್ಞಾನಿಕ ಆವಿಷ್ಕಾರಗಳು ಅವಕಾಶಗಳನ್ನೂ ಸೃಷ್ಟಿಸುತ್ತದೆ ” ಎನ್ನುವ ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ನಾವೂರು ವ್ಯಾಪ್ತಿಯಲ್ಲಿ 20 ಕ್ಕೂ ಮಿಕ್ಕಿ ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು: ಮಂಗಳೂರಿನ ಕೇಂದ್ರಕ್ಕೆ ರೂ. 1.49 ಕೋಟಿ ಅನುದಾನ ಮೀಸಲು: ಸಂಸದ ಕ್ಯಾ. ಚೌಟ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : ಶ್ರೇಷ್ಠ ಮಹಾಧರ್ಮಾಧ್ಯಕ್ಷರುಗಳು ಭಾಗಿ -ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರುಗಳು, ಡಾ.ಹೆಗ್ಗಡೆ ಆಗಮನ

Suddi Udaya

ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ & ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ಸಿರಿ ಸಂಸ್ಥೆಗೆ ಭೇಟಿ

Suddi Udaya
error: Content is protected !!