25.7 C
ಪುತ್ತೂರು, ಬೆಳ್ತಂಗಡಿ
May 17, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ಎನ್ ಎಸ್ ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

ನಾರಾವಿ: “ಪರಿಸರವನ್ನ ಸ್ವಚ್ಛಗೊಳಿಸುವುದು ಮಾತ್ರ ಎನ್ ಎಸ್ ಎಸ್ ನ ಕೆಲಸವಲ್ಲ. ಮನುಷ್ಯನ ಮಾನಸಿಕ ಕೊಳೆಯನ್ನು ತೊಡೆದು ಅರಿವನ್ನು ಮೂಡಿಸಿ ಮನೋಬಲವನ್ನು ನೀಡುವುದೇ ಎನ್ ಎಸ್ ಎಸ್. ವಿದ್ಯಾರ್ಥಿಗಳಲ್ಲಿ ತನ್ನತನವನ್ನು ಬೆಳೆಸಿ ಪ್ರೇರೇಪಿಸಿ ಸುಂದರ ವ್ಯಕ್ತಿತ್ವವನ್ನು ನೀಡುವ ಕಲೆಗಾರಿಕೆ ಇರುವ ಏಕೈಕ ಸಂಸ್ಥೆ ಯನ್ ಯಸ್ ಯಸ್ ” ಎಂದು ಶ್ರೀ ಧವಳ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಪ್ರೊ. ಸಂತೋಷ್ ಶೆಟ್ಟಿ ಅಭಿಪ್ರಾಯಪಟ್ಟರು . ಅವರು ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ 2024-25ನೇ ಸಾಲಿನ ಕಾರ್ಯಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ವಂ.ಡಾ.ಆಲ್ವಿನ್ ಸೆರಾವೋ ಅವರು “ಎನ್ಎಸ್ಎಸ್ ನಲ್ಲಿ ಪರಿಪೂರ್ಣವಾಗಿ ತೊಡಗಿಸಿಕೊಂಡವರಲ್ಲಿ ಭೇದಭಾವ ಇರೋದಿಲ್ಲ. ನೈತಿಕತೆ ಹಾಗೂ ಆರೋಗ್ಯ ಪೂರ್ಣ ಬದುಕು ಅವರಿಗೆ ಒಲಿಯುತ್ತದೆ” ಎಂದರು.

ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ದಿನೇಶ್ ಬಿ.ಕೆ ಬಳಂಜ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯದರ್ಶಿ ಕುಮಾರಿ ರಶ್ವಿತಾ ಧನ್ಯವಾದವಿತ್ತರು. ಸ್ವಯಂಸೇವಕಿ ಕು.ಅನ್ವಿತಾ ರಾವ್ ಕಾರ್ಯಕ್ರಮವನ್ನು ನಿರೂಪಿಸಿದರು.
ಉಪಪ್ರಾಂಶುಪಾಲರಾದ ಸಂತೋಷ್ ಸಲ್ಡಾನ, ಉಪನ್ಯಾಸಕರಾದ ಅವಿಲ್ ಮೋರಸ್, ಸಂತೋಷ್ ಈದು, ಅವಿನಾಶ್ ಲೋಬೋ, ಶ್ರೀಮತಿ ಅನಿತಾ ಡಿಸೋಜಾ ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆಗೆಯುವಂತೆ ಸ್ಥಳೀಯರ ಒತ್ತಾಯ

Suddi Udaya

ಅಂಡಿಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಕಾಪಿನಡ್ಕ ಜಿನ್ನಪ್ಪ ಪೂಜಾರಿ ಮರಳಿ ಕಾಂಗ್ರೇಸ್ ಗೆ ಸೇರ್ಪಡೆ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿತುಳು ನಾಡು-ನುಡಿ-ಸಂಸ್ಕೃತಿ ಒರಿಪಾವುನ ಬುಳೆಪಾವುನ ಮಾರ್ಗೋಪಾಯೊಲು” ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಕಾಜೂರ್ ಸರ್ಕಲ್ : ಪ್ರಜಾಭಾರತ ಸಂಗಮ

Suddi Udaya
error: Content is protected !!