ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ಎನ್ ಎಸ್ ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

ನಾರಾವಿ: “ಪರಿಸರವನ್ನ ಸ್ವಚ್ಛಗೊಳಿಸುವುದು ಮಾತ್ರ ಎನ್ ಎಸ್ ಎಸ್ ನ ಕೆಲಸವಲ್ಲ. ಮನುಷ್ಯನ ಮಾನಸಿಕ ಕೊಳೆಯನ್ನು ತೊಡೆದು ಅರಿವನ್ನು ಮೂಡಿಸಿ ಮನೋಬಲವನ್ನು ನೀಡುವುದೇ ಎನ್ ಎಸ್ ಎಸ್. ವಿದ್ಯಾರ್ಥಿಗಳಲ್ಲಿ ತನ್ನತನವನ್ನು ಬೆಳೆಸಿ ಪ್ರೇರೇಪಿಸಿ ಸುಂದರ ವ್ಯಕ್ತಿತ್ವವನ್ನು ನೀಡುವ ಕಲೆಗಾರಿಕೆ ಇರುವ ಏಕೈಕ ಸಂಸ್ಥೆ ಯನ್ ಯಸ್ ಯಸ್ ” ಎಂದು ಶ್ರೀ ಧವಳ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಪ್ರೊ. ಸಂತೋಷ್ ಶೆಟ್ಟಿ ಅಭಿಪ್ರಾಯಪಟ್ಟರು . ಅವರು ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ 2024-25ನೇ ಸಾಲಿನ ಕಾರ್ಯಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ವಂ.ಡಾ.ಆಲ್ವಿನ್ ಸೆರಾವೋ ಅವರು “ಎನ್ಎಸ್ಎಸ್ ನಲ್ಲಿ ಪರಿಪೂರ್ಣವಾಗಿ ತೊಡಗಿಸಿಕೊಂಡವರಲ್ಲಿ ಭೇದಭಾವ ಇರೋದಿಲ್ಲ. ನೈತಿಕತೆ ಹಾಗೂ ಆರೋಗ್ಯ ಪೂರ್ಣ ಬದುಕು ಅವರಿಗೆ ಒಲಿಯುತ್ತದೆ” ಎಂದರು.

ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ದಿನೇಶ್ ಬಿ.ಕೆ ಬಳಂಜ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯದರ್ಶಿ ಕುಮಾರಿ ರಶ್ವಿತಾ ಧನ್ಯವಾದವಿತ್ತರು. ಸ್ವಯಂಸೇವಕಿ ಕು.ಅನ್ವಿತಾ ರಾವ್ ಕಾರ್ಯಕ್ರಮವನ್ನು ನಿರೂಪಿಸಿದರು.
ಉಪಪ್ರಾಂಶುಪಾಲರಾದ ಸಂತೋಷ್ ಸಲ್ಡಾನ, ಉಪನ್ಯಾಸಕರಾದ ಅವಿಲ್ ಮೋರಸ್, ಸಂತೋಷ್ ಈದು, ಅವಿನಾಶ್ ಲೋಬೋ, ಶ್ರೀಮತಿ ಅನಿತಾ ಡಿಸೋಜಾ ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಮುಳಿಯ – ಹೊಸ ಲೋಗೋ- ಅನಾವರಣ : ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

Suddi Udaya

ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ರವರ ಪ್ರತಿಮೆಗೆ ಮಾಲಾರ್ಪಣೆ, ನುಡಿನಮನ

Suddi Udaya

ನಾಲ್ಕೂರು: ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರ ತೆರವು

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಶಿಬಿರ’ದ ಉದ್ಘಾಟನೆ

Suddi Udaya

ಬಜಿರೆ ಪಿ.ಎಂ. ಶ್ರೀ ಸ. ಉ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕೊಕ್ರಾಡಿ ಬೊಳ್ಳಕುಮೇರುನಲ್ಲಿ ಸುಲ್ಕೇರಿ ನದಿಯಲ್ಲಿ ಅಕ್ರಮ ಮರಳು ದಂಧೆ ವೇಣೂರು ಪೊಲೀಸರ ದಾಳಿ – ಡ್ರಜ್ಜಿಂಗ್ ಮಿಶನ್ ವಶ ಇಬ್ಬರ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!