22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ದೀಕ್ಷಾ ಗ್ರಂಥಿದಾರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಸುಲ್ಕೇರಿಮೊಗ್ರು, ಯುವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಸುಲ್ಕೇರಿಮೊಗ್ರು ಇವುಗಳ ಸಹಭಾಗಿತ್ವದಲ್ಲಿ ಗುರುಪೂಜೆ, ದೀಕ್ಷಾ ಗ್ರಂಥಿದಾರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಸಭಾಂಗಣದಲ್ಲಿ ಜರಗಿತು.


ಪೂಜಾ ಕಾರ್ಯಕ್ರಮವು ನಿರಂಜನ್ ಶಾಂತಿ ಕೊಹಿನೂರ್ ಪುರೋಹಿತರ ಬಳಗದಿಂದ ನಡೆಯಿತು.
ಸಭಾ ಕಾರ್ಯಕ್ರಮವು ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸಂಕೇತ್ ಬಂಗೇರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು ನವೀನ್ ಕುಮಾರ್ ಮರಿಕೆ, ಕಾರ್ಯಕ್ರಮವನ್ನು ಉದ್ಘಾಟಿಸಿದರು.

ವೇದಿಕೆಯಲ್ಲಿ ಪಿತಾಂಬರ ಹೇರಾಜೆ, ಜಯ ವಿಕ್ರಮ ಕಲ್ಲಾಪು, ಎಂ. ಕೆ. ಪ್ರಸಾದ್, ಸದಾಶಿವ ಪೂಜಾರಿ ಊರ, ನವೀನ್ ಸಾಲಿಯಾನ್ ಪಾಲ್ದಿಮನೆ, ಶ್ರೀಮತಿ ಗೀತಾ. ಎಚ್. ಅಮ್ಮಾಜಿ ಹೊಕ್ಕಳ, ಬೇಬಿ ಬಂಗೇರ ಹುಂಬೆದಡ್ಕ, ಗುರುವಪ್ಪ ಪೂಜಾರಿ ಪಟ್ಲ. ಸಂಘದ ಕಾರ್ಯದರ್ಶಿ ವಿಜಯ್ ಕುಮಾರ್, ನಂದನ್ ಕುಮಾರ್, ಕಾರ್ಯದರ್ಶಿ ಸಚ್ಚಿನ್, ಅಧ್ಯಕ್ಷರು ಯುವ ಬಿಲ್ಲವ ವೇದಿಕೆ. ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಶಕುಂತಳ ಕಾರ್ಯದರ್ಶಿ ಮಮತಾ ಉಪಸ್ಥಿತರಿದ್ದರು.
ಗ್ರಾಮದ ಪ್ರತಿಭಾವಂತ ವಿಧ್ಯಾರ್ಥಿಗಳನ್ನು ಗೌರವಿಸಿ ಹಾಗೂ ಗ್ರಾಮದಲ್ಲಿ ವಿಶೇಷ ಸಾಧನೆ ಮಾಡಿದ ಸಮಾಜ ಬಾಂಧವರನ್ನು ಸನ್ಮಾನಿಸಲಾಯಿತು. ವಿಶೇಷವಾಗಿ ದಾನಿಗಳಾದ ಅಮ್ಮಾಜಿ ಕೋಟ್ಯಾನ್ ಇವರನ್ನು ಸನ್ಮಾನಿಸಲಾಯಿತು.

ಧನುಷ್ ಪ್ರಾರ್ಥನೆಯನ್ನು ಮಾಡಿ ಸಂಘದ ಕಾರ್ಯದರ್ಶಿ ವಿಜಯ್ ಕುಮಾರ್ ಸ್ವಾಗತಿಸಿ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ನಂದನ್ ಕುಮಾರ್ ಧನ್ಯವಾದವನ್ನಿತ್ತರು. ಸೌಮ್ಯ ಕೋಟ್ಯಾನ್ ಮೂಡಬಿದ್ರೆ ಕಾರ್ಯಕ್ರಮ ನಿರೂಪಿಸಿದರು.

Related posts

ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾಗದರ್ಶನದಲ್ಲಿ ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಸ್ವಚ್ಛತಾ ಕಾರ್ಯ

Suddi Udaya

ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜಾತ್ರಾ ಸಮಿತಿ ರಚನೆ

Suddi Udaya

ಉಜಿರೆ: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಡಿ.17: ಬೆಳ್ತಂಗಡಿ ತಾಲೂಕು18 ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಕುಟುಂಬಸ್ಥರಿಗೆ ಮೆಸ್ಕಾಂ ಇಲಾಖೆಯ ಪರಿಹಾರದ ಚೆಕ್ ನ್ನು ಶಾಸಕ ಹರೀಶ್ ಪೂಂಜರಿಂದ ಹಸ್ತಾಂತರ

Suddi Udaya

ಪಾಸ್ಕ ಹಬ್ಬದ ಅಂಗವಾಗಿ ಹನ್ನೆರಡು ಜನ ಶಿಷ್ಯರ ಕಾಲುಗಳನ್ನು ತೊಳೆದ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲಾರೆನ್ಸ್

Suddi Udaya
error: Content is protected !!