23.3 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ಎನ್ ಎಸ್ ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

ನಾರಾವಿ: “ಪರಿಸರವನ್ನ ಸ್ವಚ್ಛಗೊಳಿಸುವುದು ಮಾತ್ರ ಎನ್ ಎಸ್ ಎಸ್ ನ ಕೆಲಸವಲ್ಲ. ಮನುಷ್ಯನ ಮಾನಸಿಕ ಕೊಳೆಯನ್ನು ತೊಡೆದು ಅರಿವನ್ನು ಮೂಡಿಸಿ ಮನೋಬಲವನ್ನು ನೀಡುವುದೇ ಎನ್ ಎಸ್ ಎಸ್. ವಿದ್ಯಾರ್ಥಿಗಳಲ್ಲಿ ತನ್ನತನವನ್ನು ಬೆಳೆಸಿ ಪ್ರೇರೇಪಿಸಿ ಸುಂದರ ವ್ಯಕ್ತಿತ್ವವನ್ನು ನೀಡುವ ಕಲೆಗಾರಿಕೆ ಇರುವ ಏಕೈಕ ಸಂಸ್ಥೆ ಯನ್ ಯಸ್ ಯಸ್ ” ಎಂದು ಶ್ರೀ ಧವಳ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಪ್ರೊ. ಸಂತೋಷ್ ಶೆಟ್ಟಿ ಅಭಿಪ್ರಾಯಪಟ್ಟರು . ಅವರು ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ 2024-25ನೇ ಸಾಲಿನ ಕಾರ್ಯಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ವಂ.ಡಾ.ಆಲ್ವಿನ್ ಸೆರಾವೋ ಅವರು “ಎನ್ಎಸ್ಎಸ್ ನಲ್ಲಿ ಪರಿಪೂರ್ಣವಾಗಿ ತೊಡಗಿಸಿಕೊಂಡವರಲ್ಲಿ ಭೇದಭಾವ ಇರೋದಿಲ್ಲ. ನೈತಿಕತೆ ಹಾಗೂ ಆರೋಗ್ಯ ಪೂರ್ಣ ಬದುಕು ಅವರಿಗೆ ಒಲಿಯುತ್ತದೆ” ಎಂದರು.

ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ದಿನೇಶ್ ಬಿ.ಕೆ ಬಳಂಜ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯದರ್ಶಿ ಕುಮಾರಿ ರಶ್ವಿತಾ ಧನ್ಯವಾದವಿತ್ತರು. ಸ್ವಯಂಸೇವಕಿ ಕು.ಅನ್ವಿತಾ ರಾವ್ ಕಾರ್ಯಕ್ರಮವನ್ನು ನಿರೂಪಿಸಿದರು.
ಉಪಪ್ರಾಂಶುಪಾಲರಾದ ಸಂತೋಷ್ ಸಲ್ಡಾನ, ಉಪನ್ಯಾಸಕರಾದ ಅವಿಲ್ ಮೋರಸ್, ಸಂತೋಷ್ ಈದು, ಅವಿನಾಶ್ ಲೋಬೋ, ಶ್ರೀಮತಿ ಅನಿತಾ ಡಿಸೋಜಾ ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢ ಕಲಶಾಭಿಷೇಕ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರು ಪ್ರತಿನಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ತ್ರೋಬಾಲ್ ತಂಡಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಉಜಿರೆ: ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘಕ್ಕೆ ಹಾಸನ ಬಿಜಿಎಸ್ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿ ಸದಸ್ಯರ ಭೇಟಿ

Suddi Udaya
error: Content is protected !!