ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ಎನ್ ಎಸ್ ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

ನಾರಾವಿ: “ಪರಿಸರವನ್ನ ಸ್ವಚ್ಛಗೊಳಿಸುವುದು ಮಾತ್ರ ಎನ್ ಎಸ್ ಎಸ್ ನ ಕೆಲಸವಲ್ಲ. ಮನುಷ್ಯನ ಮಾನಸಿಕ ಕೊಳೆಯನ್ನು ತೊಡೆದು ಅರಿವನ್ನು ಮೂಡಿಸಿ ಮನೋಬಲವನ್ನು ನೀಡುವುದೇ ಎನ್ ಎಸ್ ಎಸ್. ವಿದ್ಯಾರ್ಥಿಗಳಲ್ಲಿ ತನ್ನತನವನ್ನು ಬೆಳೆಸಿ ಪ್ರೇರೇಪಿಸಿ ಸುಂದರ ವ್ಯಕ್ತಿತ್ವವನ್ನು ನೀಡುವ ಕಲೆಗಾರಿಕೆ ಇರುವ ಏಕೈಕ ಸಂಸ್ಥೆ ಯನ್ ಯಸ್ ಯಸ್ ” ಎಂದು ಶ್ರೀ ಧವಳ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಪ್ರೊ. ಸಂತೋಷ್ ಶೆಟ್ಟಿ ಅಭಿಪ್ರಾಯಪಟ್ಟರು . ಅವರು ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ 2024-25ನೇ ಸಾಲಿನ ಕಾರ್ಯಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ವಂ.ಡಾ.ಆಲ್ವಿನ್ ಸೆರಾವೋ ಅವರು “ಎನ್ಎಸ್ಎಸ್ ನಲ್ಲಿ ಪರಿಪೂರ್ಣವಾಗಿ ತೊಡಗಿಸಿಕೊಂಡವರಲ್ಲಿ ಭೇದಭಾವ ಇರೋದಿಲ್ಲ. ನೈತಿಕತೆ ಹಾಗೂ ಆರೋಗ್ಯ ಪೂರ್ಣ ಬದುಕು ಅವರಿಗೆ ಒಲಿಯುತ್ತದೆ” ಎಂದರು.

ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ದಿನೇಶ್ ಬಿ.ಕೆ ಬಳಂಜ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯದರ್ಶಿ ಕುಮಾರಿ ರಶ್ವಿತಾ ಧನ್ಯವಾದವಿತ್ತರು. ಸ್ವಯಂಸೇವಕಿ ಕು.ಅನ್ವಿತಾ ರಾವ್ ಕಾರ್ಯಕ್ರಮವನ್ನು ನಿರೂಪಿಸಿದರು.
ಉಪಪ್ರಾಂಶುಪಾಲರಾದ ಸಂತೋಷ್ ಸಲ್ಡಾನ, ಉಪನ್ಯಾಸಕರಾದ ಅವಿಲ್ ಮೋರಸ್, ಸಂತೋಷ್ ಈದು, ಅವಿನಾಶ್ ಲೋಬೋ, ಶ್ರೀಮತಿ ಅನಿತಾ ಡಿಸೋಜಾ ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಬಳಂಜ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಗೌರವಾರ್ಪಣೆ

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ದರ್ಶನಕ್ಕಾಗಿ ಬಿಜೆಪಿ ಕಾರ್ಯಕರ್ತರಿಗೆ ಆಯಾ ರಾಜ್ಯದ ನೇತೃತ್ವದಲ್ಲಿ ವಿಶೇಷ ಅವಕಾಶ: ಬೆಳಾಲಿನ ಬಿಜೆಪಿ ಮುಖಂಡ ಸೀತಾರಾಮ ಬಿ.ಎಸ್. ರವರಿಂದ ಭಕ್ತರಿಗೆ ಮಾರ್ಗದರ್ಶನ ನೀಡುವ ಸೇವೆ

Suddi Udaya

ಬೆಂಗಳೂರಿನಲ್ಲಿ ನಡೆಯುವ ಟೆಂಟ್ ಡೇಕೊರ್ & ಕೇಟರಿಂಗ್ ಎಕ್ಸ್ಪೋ 2026 : ಡಾ. ಡಿ ವೀರೇಂದ್ರ ಹೆಗ್ಗಡೆ, ಹರ್ಷೇಂದ್ರ ಕುಮಾರ್ ಹಾಗೂ ಡಾ.ಮೋಹನ್ ಆಳ್ವ ರವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!