July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

ಬೆಳ್ತಂಗಡಿ : ‘ಶಾಂತಿಶ್ರೀ ‘ ಮಹಿಳಾ ಸಮಾಜದ ವತಿಯಿಂದ ಶ್ರೀ. ಧ. ಮಂ. ಕಲಾಭವನದ ‘ ಪಿನಾಕಿಹಾಲ್ ‘ನಲ್ಲಿ ಕಂದ ಮೂಲರಹಿತ ಆಹಾರೋತ್ಸವವನ್ನು ನಡೆಸಲಾಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಪ್ರಸನ್ನ ಆರ್. ಹೆಗ್ಡೆ ಯವರು ದೀಪ ಬೆಳಗುವ ಮೂಲಕ ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾದ ಭಾ. ಜೈನ್ ಮಿಲನ್ ಬೆಳ್ತಂಗಡಿ, ಇದರ ಅಧ್ಯಕ್ಷರಾದ ವೀರ್ ನವೀನ್ ಕುಮಾರ್ ಜೈನ್ ರವರು ಮನೆಗಳಲ್ಲಿ ಶುದ್ಧವಾದ ಪೌಷ್ಟಿಕಾಂಶ ಭರಿತ, ಸಾಂಪ್ರದಾಯಿಕ ಆಹಾರಗಳನ್ನು ತಯಾರಿಸುವಲ್ಲಿ ಅಮ್ಮಂದಿರ ಪಾತ್ರ ಹಿರಿದಾದುದು. ಜೈನ ಆಹಾರ ಪದ್ಧತಿಗಳು ವೈಜ್ಞಾನಿಕವಾಗಿಯೂ ದೃಢೀಕರಿಸಲ್ಪಟ್ಟಿದೆ ಎಂಬುದಾಗಿ ತಿಳಿಸಿದರು. ಅಲ್ಲದೆ ನವೆಂಬರ್ ತಿಂಗಳಲ್ಲಿ ನಡೆಯಲಿರುವ ವಲಯ ಮಟ್ಟದ ಜಿನಭಜನೆ ಕಾರ್ಯಕ್ರಮದ ಮಾಹಿತಿಯನ್ನು ನೀಡಿದರು.


ಅಧ್ಯಕ್ಷ ಸ್ಥಾನದಿಂದ ಮಾತನಾಡಿದ ಪ್ರೊ | ತ್ರಿಶಲಾ ಜೈನ್.ಕೆ. ಎಸ್ ರವರು ಕಂದ ಮೂಲರಹಿತ ಆಹಾರ ಮಹತ್ವದ ಬಗ್ಗೆ ತಿಳಿಸುತ್ತಾ, ಆಹಾರದ ವಿಧಗಳಾದ ರಾಜಸ ಆಹಾರ, ತಾಮಸ ಆಹಾರ ಮತ್ತು ಸಾತ್ವಿಕ ಆಹಾರದ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. 30 ಬಗೆಯ ವಿವಿಧ ಕಂದ ಮೂಲರಹಿತ ಖಾದ್ಯಗಳನ್ನು ತಯಾರಿಸಿ ತಂದಿರುವ ಸದಸ್ಯೆಯರನ್ನು ಅಭಿನಂದಿಸಿದರು.


ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವೈಶಾಲಿ ಬಲ್ಲಾಳ್, ಮಂಗಳೂರು, ಇವರು ಅತಿಥಿಗಳನ್ನು ಗೌರವಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶ್ರೀಮತಿ ಸುಷ್ಮಾ ಮತ್ತು ಬಳಗದವರು ಪ್ರಾರ್ಥನೆ ಹಾಡಿದರು. ಕಾರ್ಯದರ್ಶಿಯವರಾದ ಶ್ರೀಮತಿ ರಾಜಶ್ರೀ. ಎಸ್ ಹೆಗ್ಡೆಯವರು ಸ್ವಾಗತಿಸಿ, ಶ್ರೀಮತಿ ಅನುಪಮಾ ಡಿ ಜೈನ್ ರವರು ಸಹಕರಿಸಿದರು. ಶ್ರೀಮತಿ ಸರಿಕಾ ರವರು ವಂದಿಸಿದರು. ಶ್ರೀಮತಿ ಧವಳಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಡಿ.6: ಲಾಯಿಲ ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಪ್ರಶ್ನಾಚಿಂತನೆ

Suddi Udaya

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವರ ಬ್ರಹ್ಮಕಲಶೋತ್ಸವದ ಸಮಿತಿ ಪುನರ್ ರಚನೆ

Suddi Udaya

ಪೆಟ್ರೋಲು, ಡೀಸೆಲ್ ಏರಿಕೆ ಬೆನ್ನಲ್ಲೇ ಸಿಎನ್‌ಜಿ ದರ 2 ರೂ.ಗೆ ಏರಿಕೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

Suddi Udaya

ಯಕ್ಷಧ್ರುವ ಪಟ್ಣ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವ ಡಿ.2: ಉಜಿರೆ ರಥಬೀದಿಯಲ್ಲಿ ” ಯಕ್ಷ ಸಂಭ್ರಮ-2023″

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್ ನ ಆಡಳಿತ ಮಂಡಳಿ ವಜಾ ಆದೇಶಕ್ಕೆ ರಾಜ್ಯ ಹೈಕೋರ್ಟ್ ನಿಂದ ತಡೆ: ಯಥಾಸ್ಥಿತಿ ಕಾಪಾಡುವಂತೆ ಆದೇಶ

Suddi Udaya
error: Content is protected !!