July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿಹಿಂದುಳಿದ ವರ್ಗದ ಹಿಂದೂ ಸಮುದಾಯದ ಮಹಿಳೆಯರನ್ನು ಅಸಹ್ಯ
ವಾಗಿ ಅವಹೇಳನಕಾರಿಯಾಗಿ ಹೀಯಾಳಿಸಿದ ಅರಣ್ಯಾಧಿಕಾರಿ ಸಂಜೀವ್ ಪೂಜಾರಿ ಕಾಣಿಯೂರು ರವರ ವರ್ತನೆ ಖಂಡನಿಯವೆಂದು ಬೆಳ್ತಂಗಡಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಸುಧೀರ್ ಆರ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸರಕಾರದ ಅರಣ್ಯ ಇಲಾಖೆಯಲ್ಲಿ 28 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸಂಜೀವ ಪೂಜಾರಿ ಅವರ ಈ ಹೇಳಿಕೆ ಗಮನಿಸಿದಾಗ ಅವರ ಮನಸ್ಥಿತಿಯೂ ಅವರ ವೃತ್ತಿ ಜೀವನದ ಪಾವಿತ್ರತೆಯನ್ನು ಉಲ್ಲಂಘಿಸಿದ್ದಾರೆ ಎಂಬುದನ್ನು ಸೂಚಿಸಿತ್ತದೆ. ಸಮಾಜದಲ್ಲಿ ಹೆಣ್ಣನ್ನು ದೇವತೆಯಾಗಿ ಗೌರವಿಸಿ ಪೂಜಿಸುವ ಸಂಸ್ಕೃತಿ ನಮ್ಮದು. ನವರಾತ್ರಿ ಶುಭ ಗಳಿಗೆಯಲ್ಲಿ ಸಂಜೀವ ಪೂಜಾರಿಯವರ ಬಾಯಲ್ಲಿ ಇಂತಹ ಅಸಹ್ಯ ನುಡಿಮುತ್ತುಗಳು ಉದುರಬಾರದಿತ್ತು, ಅವರು ಇಡೀ ಹಿಂದೂ ಸಮಾಜದ ಸಾರ್ವತ್ರಿಕ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು.

ಚುನಾವಣೆಯ ಸಂದರ್ಭದಲ್ಲಿ ಕ್ಷುಲ್ಲಕ ಜಾತಿ ರಾಜಕಾರಣ ಮಾಡುವ ಜಾತಿ ಸಂಘಗಳು ಇಂತಹ ಗಂಭೀರ ವಿಚಾರದಲ್ಲಿ ಮೌನಕ್ಕೆ ಶರಣಾಗಿರುವುದು ಬಗ್ಗೆ ತೀವ್ರ ಬೇಸರ ಹೊರ ಹಾಕಿದ್ದಾರೆ.

Related posts

ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿಮರ ಸ್ಥಾಪನೆ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್‌ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

Suddi Udaya
error: Content is protected !!