25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿಹಿಂದುಳಿದ ವರ್ಗದ ಹಿಂದೂ ಸಮುದಾಯದ ಮಹಿಳೆಯರನ್ನು ಅಸಹ್ಯ
ವಾಗಿ ಅವಹೇಳನಕಾರಿಯಾಗಿ ಹೀಯಾಳಿಸಿದ ಅರಣ್ಯಾಧಿಕಾರಿ ಸಂಜೀವ್ ಪೂಜಾರಿ ಕಾಣಿಯೂರು ರವರ ವರ್ತನೆ ಖಂಡನಿಯವೆಂದು ಬೆಳ್ತಂಗಡಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಸುಧೀರ್ ಆರ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸರಕಾರದ ಅರಣ್ಯ ಇಲಾಖೆಯಲ್ಲಿ 28 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸಂಜೀವ ಪೂಜಾರಿ ಅವರ ಈ ಹೇಳಿಕೆ ಗಮನಿಸಿದಾಗ ಅವರ ಮನಸ್ಥಿತಿಯೂ ಅವರ ವೃತ್ತಿ ಜೀವನದ ಪಾವಿತ್ರತೆಯನ್ನು ಉಲ್ಲಂಘಿಸಿದ್ದಾರೆ ಎಂಬುದನ್ನು ಸೂಚಿಸಿತ್ತದೆ. ಸಮಾಜದಲ್ಲಿ ಹೆಣ್ಣನ್ನು ದೇವತೆಯಾಗಿ ಗೌರವಿಸಿ ಪೂಜಿಸುವ ಸಂಸ್ಕೃತಿ ನಮ್ಮದು. ನವರಾತ್ರಿ ಶುಭ ಗಳಿಗೆಯಲ್ಲಿ ಸಂಜೀವ ಪೂಜಾರಿಯವರ ಬಾಯಲ್ಲಿ ಇಂತಹ ಅಸಹ್ಯ ನುಡಿಮುತ್ತುಗಳು ಉದುರಬಾರದಿತ್ತು, ಅವರು ಇಡೀ ಹಿಂದೂ ಸಮಾಜದ ಸಾರ್ವತ್ರಿಕ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು.

ಚುನಾವಣೆಯ ಸಂದರ್ಭದಲ್ಲಿ ಕ್ಷುಲ್ಲಕ ಜಾತಿ ರಾಜಕಾರಣ ಮಾಡುವ ಜಾತಿ ಸಂಘಗಳು ಇಂತಹ ಗಂಭೀರ ವಿಚಾರದಲ್ಲಿ ಮೌನಕ್ಕೆ ಶರಣಾಗಿರುವುದು ಬಗ್ಗೆ ತೀವ್ರ ಬೇಸರ ಹೊರ ಹಾಕಿದ್ದಾರೆ.

Related posts

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

Suddi Udaya

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದಲ್ಲಿ ನಾಲ್ಕೆತ್ತು ಕೋಲ

Suddi Udaya

ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಔಷಧಿ ವನ ಕಾರ್ಯಕ್ರಮ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ “ಸತ್ಸಂಗ”

Suddi Udaya

ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಾಗೂ ವಿಜಯ ದಶಮಿ ಉತ್ಸವ ಪ್ರಯುಕ್ತ ಸಭಾ ಕಾರ್ಯಕ್ರಮ

Suddi Udaya
error: Content is protected !!