25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅತ್ಯುತ್ತಮ ಪ್ರವಾಸಿ ತಾಣಗಳ ಸ್ಪರ್ಧೆಯಲ್ಲಿ ಕುತ್ಲೂರಿನ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ರವರಿಗೆ ಪ್ರಶಸ್ತಿ: ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಗೌರರ್ವಾಪಣೆ

ಬೆಳ್ತಂಗಡಿ: ಅಂತರಾಷ್ಟ್ರೀಯ ಪ್ರವಾಸೋದ್ಯಮ ದಿನದ ಅಂಗವಾಗಿ ಕೇಂದ್ರ ಸರಕಾರ ಮತ್ತು ಕೇಂದ್ರ ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ಅತ್ಯುತ್ತಮ ಪ್ರವಾಸಿ ತಾಣಗಳು ಸ್ಪರ್ಧೆಯಲ್ಲಿ “ಸಾಹಸ ಪ್ರವಾಸೋದ್ಯಮ” ವಿಭಾದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಕುತ್ಲೂರು ಗ್ರಾಮದ ಪ್ರತಿನಿಧಿಗಳಾಗಿದ್ದ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ಇವರಿಗೆ ಇತ್ತೀಚೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾನ್ಯ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಘನ ಉಪಸ್ಥಿತಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರು ಮತ್ತು ಇತರ ಗಣ್ಯರು ಪ್ರಶಸ್ತಿ ನೀಡಿ ಅಭಿನಂದಿಸಿದ್ದರು.

ಈ ಸಾಧನೆಗೆ ಗೌರವ ಸಲ್ಲಿಸುವ ಸಲುವಾಗಿ ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಮಂಗಳೂರಿನ “ದಿ ಓಶಿಯನ್ ಪರ್ಲ್” ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮದ ಪ್ರತಿನಿಧಿಗಳಾಗಿ ಭಾಗವಹಿದ್ದ ಸುಂದರ್ ಕೋಟ್ಯಾನ್, ಸಂತೋಷ್ ಮೆಲ್ವಿನ್ ಮತ್ತು ಶಿವರಾಜ್ ಅಂಚನ್ ಇವರನ್ನು ಕರ್ನಾಟಕ ಸರಕಾರದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾದ ರಾಜೇಂದ್ರ ಕೆ ವಿ, ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಸೇರಿದಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಗೌರವಿಸಿ ಅಭಿನಂದಿಸಿದರು.

ಚುಣಾವಣಾ ನೀತಿಸಂಹಿತೆ ಜಾರಿಯಲ್ಲಿ ಇರುವ ಕಾರಣ ಜನಪ್ರತಿನಿಧಿಗಳಿಗೆ ಭಾಗವಹಿಸಲು ಅವಕಾಶ ಇರಲಿಲ್ಲ.

Related posts

ಉಜಿರೆ ಹಳೆಪೇಟೆ ಸ.ಪ್ರೌ. ಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿತ: ಶಾಸಕ ಹರೀಶ್ ಪೂಂಜ ಭೇಟಿ: ತಕ್ಷಣವೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ

Suddi Udaya

ಭಾರತೀಯ ಸೇನೆಗೆ ಶಕ್ತಿ ತುಂಬಲು ಪ್ರಾರ್ಥನೆ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಬೆಳ್ತಂಗಡಿ: ಸಂಜೀವಿನಿ ಸಂಘಗಳಿಗೆ ರೂ.1.03 ಕೋಟಿ ಬ್ಯಾಂಕ್ ಸಾಲ ವಿತರಣೆ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಎಕ್ಸೆಲ್ ಟೆಕ್ನೊ ಸ್ಕೂಲ್ ವೇಣೂರಿಗೆ ಶೇ.100 ಫಲಿತಾಂಶ:ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ

Suddi Udaya
error: Content is protected !!