September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅತ್ಯುತ್ತಮ ಪ್ರವಾಸಿ ತಾಣಗಳ ಸ್ಪರ್ಧೆಯಲ್ಲಿ ಕುತ್ಲೂರಿನ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ರವರಿಗೆ ಪ್ರಶಸ್ತಿ: ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಗೌರರ್ವಾಪಣೆ

ಬೆಳ್ತಂಗಡಿ: ಅಂತರಾಷ್ಟ್ರೀಯ ಪ್ರವಾಸೋದ್ಯಮ ದಿನದ ಅಂಗವಾಗಿ ಕೇಂದ್ರ ಸರಕಾರ ಮತ್ತು ಕೇಂದ್ರ ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ಅತ್ಯುತ್ತಮ ಪ್ರವಾಸಿ ತಾಣಗಳು ಸ್ಪರ್ಧೆಯಲ್ಲಿ “ಸಾಹಸ ಪ್ರವಾಸೋದ್ಯಮ” ವಿಭಾದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಕುತ್ಲೂರು ಗ್ರಾಮದ ಪ್ರತಿನಿಧಿಗಳಾಗಿದ್ದ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ಇವರಿಗೆ ಇತ್ತೀಚೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾನ್ಯ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಘನ ಉಪಸ್ಥಿತಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರು ಮತ್ತು ಇತರ ಗಣ್ಯರು ಪ್ರಶಸ್ತಿ ನೀಡಿ ಅಭಿನಂದಿಸಿದ್ದರು.

ಈ ಸಾಧನೆಗೆ ಗೌರವ ಸಲ್ಲಿಸುವ ಸಲುವಾಗಿ ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಮಂಗಳೂರಿನ “ದಿ ಓಶಿಯನ್ ಪರ್ಲ್” ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮದ ಪ್ರತಿನಿಧಿಗಳಾಗಿ ಭಾಗವಹಿದ್ದ ಸುಂದರ್ ಕೋಟ್ಯಾನ್, ಸಂತೋಷ್ ಮೆಲ್ವಿನ್ ಮತ್ತು ಶಿವರಾಜ್ ಅಂಚನ್ ಇವರನ್ನು ಕರ್ನಾಟಕ ಸರಕಾರದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾದ ರಾಜೇಂದ್ರ ಕೆ ವಿ, ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಸೇರಿದಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಗೌರವಿಸಿ ಅಭಿನಂದಿಸಿದರು.

ಚುಣಾವಣಾ ನೀತಿಸಂಹಿತೆ ಜಾರಿಯಲ್ಲಿ ಇರುವ ಕಾರಣ ಜನಪ್ರತಿನಿಧಿಗಳಿಗೆ ಭಾಗವಹಿಸಲು ಅವಕಾಶ ಇರಲಿಲ್ಲ.

Related posts

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

Suddi Udaya

ಗರ್ಡಾಡಿ: ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಪಾರಾದೀಪ್ ಫಾಸ್ಫೇಟ್ ಲಿಮಿಟೆಡ್ ಮಂಗಳೂರು ಘಟಕದ ಸಿ.ಎಸ್.ಆರ್ ಅನುದಾನದಲ್ಲಿ ನಿರ್ಮಾಣಗೊಂಡ ಕಾರಿಂಜ ಉರುವಾಲು ಅಂಗನವಾಡಿ ಕೇಂದ್ರದ ಉದ್ಘಾಟನೆ

Suddi Udaya

ಕಳೆದುಹೋದ ಪರ್ಸ ನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಶಿಶಿಲದ ಕೊರಗಪ್ಪ ಗೌಡ

Suddi Udaya

ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಶೇ. 98.75 ಫಲಿತಾಂಶ

Suddi Udaya

ಬೆಳಾಲು: ಎ.ಸಿ.ಪಿ. ನಾಯಕ ಸುಬೇದಾ‌ರ್ ಮೋಹನ್‌ ಗೌಡ ರವರಿಗೆ ಹುಟ್ಟೂರ ಅಭಿನಂದನೆ-ಉಜಿರೆಯಿಂದ ಸ್ವಾಗತ ಮೆರವಣಿಗೆ

Suddi Udaya
error: Content is protected !!