23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅತ್ಯುತ್ತಮ ಪ್ರವಾಸಿ ತಾಣಗಳ ಸ್ಪರ್ಧೆಯಲ್ಲಿ ಕುತ್ಲೂರಿನ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ರವರಿಗೆ ಪ್ರಶಸ್ತಿ: ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಗೌರರ್ವಾಪಣೆ

ಬೆಳ್ತಂಗಡಿ: ಅಂತರಾಷ್ಟ್ರೀಯ ಪ್ರವಾಸೋದ್ಯಮ ದಿನದ ಅಂಗವಾಗಿ ಕೇಂದ್ರ ಸರಕಾರ ಮತ್ತು ಕೇಂದ್ರ ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ಅತ್ಯುತ್ತಮ ಪ್ರವಾಸಿ ತಾಣಗಳು ಸ್ಪರ್ಧೆಯಲ್ಲಿ “ಸಾಹಸ ಪ್ರವಾಸೋದ್ಯಮ” ವಿಭಾದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಕುತ್ಲೂರು ಗ್ರಾಮದ ಪ್ರತಿನಿಧಿಗಳಾಗಿದ್ದ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ಇವರಿಗೆ ಇತ್ತೀಚೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾನ್ಯ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಘನ ಉಪಸ್ಥಿತಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರು ಮತ್ತು ಇತರ ಗಣ್ಯರು ಪ್ರಶಸ್ತಿ ನೀಡಿ ಅಭಿನಂದಿಸಿದ್ದರು.

ಈ ಸಾಧನೆಗೆ ಗೌರವ ಸಲ್ಲಿಸುವ ಸಲುವಾಗಿ ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಮಂಗಳೂರಿನ “ದಿ ಓಶಿಯನ್ ಪರ್ಲ್” ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮದ ಪ್ರತಿನಿಧಿಗಳಾಗಿ ಭಾಗವಹಿದ್ದ ಸುಂದರ್ ಕೋಟ್ಯಾನ್, ಸಂತೋಷ್ ಮೆಲ್ವಿನ್ ಮತ್ತು ಶಿವರಾಜ್ ಅಂಚನ್ ಇವರನ್ನು ಕರ್ನಾಟಕ ಸರಕಾರದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾದ ರಾಜೇಂದ್ರ ಕೆ ವಿ, ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಸೇರಿದಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಗೌರವಿಸಿ ಅಭಿನಂದಿಸಿದರು.

ಚುಣಾವಣಾ ನೀತಿಸಂಹಿತೆ ಜಾರಿಯಲ್ಲಿ ಇರುವ ಕಾರಣ ಜನಪ್ರತಿನಿಧಿಗಳಿಗೆ ಭಾಗವಹಿಸಲು ಅವಕಾಶ ಇರಲಿಲ್ಲ.

Related posts

ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

Suddi Udaya

ಮುಂಡಾಜೆ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ವಿವಿಧ ರಾಜ್ಯಗಳ ಸಹಕಾರಿ ಸಂಘಗಳ ಅಧಿಕಾರಿಗಳ ಭೇಟಿ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಪಜಿರಡ್ಕ: ನದಿಯಲ್ಲಿ ಮುಳುಗಿ ವಿದ್ಯಾರ್ಥಿ ನೀರುಪಾಲು

Suddi Udaya
error: Content is protected !!