25.8 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ನಿಡ್ಲೆ, ಪೆರ್ಲ, ಕೊಕ್ಕಡ ವಲಯ ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭ ಕಾರ್ಯಕ್ರಮವು ಅ.22 ರಂದು ನೆರವೇರಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಿವೃತ್ತ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಯಾಗಿ ಸೋಮಶೇಖರ್ ಮಾತನಾಡಿ ಕ್ರೀಡಾಕೂಟದಿಂದ ವಿದ್ಯಾರ್ಥಿಗಳ ಮಾನಸಿಕ ಸ್ಥೈರ್ಯ ದ್ವಿಗುಣವಾಗುತ್ತದೆ, ಕ್ರೀಡೆಯಿಂದ ಮಗುವಿನ ಶಾರೀರಿಕ ಬೆಳವಣಿಗೆಯಾಗುತ್ತದೆ ಈ ಕ್ರೀಡಾಕೂಟಕ್ಕೆ ಊರಿನ ಕ್ರೀಡಾಭಿಮಾನಿಗಳ ಪ್ರೋತ್ಸಾಹವನ್ನು ಮೆಚ್ಚಿ ಅಭಿನಂದಿಸಿದರು.

ವೇದಿಕೆಯಲ್ಲಿ ಸ್ಥಳೀಯರಾದ ಜೈನ್, ನಿವೃತ್ತ ಮುಖ್ಯ ಶಿಕ್ಷಕ ಜಿ ಶ್ರೀಧರನ್ ನಾಯರ್, ಪುದುವೆಟ್ಟು ಗ್ರಾಮ ಪಂಚಾಯಿತಿನ ನಿಕಟ ಪೂರ್ವ ಅಧ್ಯಕ್ಷ ಯಶವಂತ ಗೌಡ, ವಲಯ ಸಂಘಟಕರಾದ ವಿಲ್ಫ್ರೆಡ್ ಪಿಂಟೊ ,ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್, ಸಾರ್ವಜನಿಕ ಅಷ್ಟಮಿ ಸಮಿತಿಯ ಅಧ್ಯಕ್ಷ ದಿವಾಕರ ಗೌಡ , ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಶಶಿಧರ ಗುಂಪಕಲ್ಲು, ಆಶಾ ಕಾರ್ಯಕರ್ತೆಯಾದ ಶ್ರೀಮತಿ ಹರಿಣಾಕ್ಷಿ, ಶಾಲಾ ಮುಖ್ಯ ಶಿಕ್ಷಕ ಶೀನಪ್ಪಗೌಡರವರು ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಶ್ರೀಮತಿ ಸುಜಾತಾ ರವರು ಸ್ವಾಗತಿಸಿ, ನಿಶಾಂತ್ ಕುಮಾರ್ ರವರು ಧನ್ಯಾವಾದಗೈದ ಕಾರ್ಯಕ್ರಮವನ್ನು ಶ್ರೀಮತಿ ಪುಷ್ಪಲತಾ ರವರು ನಿರೂಪಿಸಿದರು.

Related posts

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಮ್ಯಾನೇಜ್ಮೆಂಟ್ ಪೇಸ್ಟ್ ನಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಅಧಿಕಾರಿಗಳಿಂದ ಅನಿರ್ದಿಷ್ಟ ಅವಧಿ ಮುಷ್ಕರ

Suddi Udaya

ಧರ್ಮಸ್ಥಳ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ‌ಹಲವು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

Suddi Udaya
error: Content is protected !!