22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ನಿಡ್ಲೆ, ಪೆರ್ಲ, ಕೊಕ್ಕಡ ವಲಯ ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭ ಕಾರ್ಯಕ್ರಮವು ಅ.22 ರಂದು ನೆರವೇರಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಿವೃತ್ತ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಯಾಗಿ ಸೋಮಶೇಖರ್ ಮಾತನಾಡಿ ಕ್ರೀಡಾಕೂಟದಿಂದ ವಿದ್ಯಾರ್ಥಿಗಳ ಮಾನಸಿಕ ಸ್ಥೈರ್ಯ ದ್ವಿಗುಣವಾಗುತ್ತದೆ, ಕ್ರೀಡೆಯಿಂದ ಮಗುವಿನ ಶಾರೀರಿಕ ಬೆಳವಣಿಗೆಯಾಗುತ್ತದೆ ಈ ಕ್ರೀಡಾಕೂಟಕ್ಕೆ ಊರಿನ ಕ್ರೀಡಾಭಿಮಾನಿಗಳ ಪ್ರೋತ್ಸಾಹವನ್ನು ಮೆಚ್ಚಿ ಅಭಿನಂದಿಸಿದರು.

ವೇದಿಕೆಯಲ್ಲಿ ಸ್ಥಳೀಯರಾದ ಜೈನ್, ನಿವೃತ್ತ ಮುಖ್ಯ ಶಿಕ್ಷಕ ಜಿ ಶ್ರೀಧರನ್ ನಾಯರ್, ಪುದುವೆಟ್ಟು ಗ್ರಾಮ ಪಂಚಾಯಿತಿನ ನಿಕಟ ಪೂರ್ವ ಅಧ್ಯಕ್ಷ ಯಶವಂತ ಗೌಡ, ವಲಯ ಸಂಘಟಕರಾದ ವಿಲ್ಫ್ರೆಡ್ ಪಿಂಟೊ ,ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್, ಸಾರ್ವಜನಿಕ ಅಷ್ಟಮಿ ಸಮಿತಿಯ ಅಧ್ಯಕ್ಷ ದಿವಾಕರ ಗೌಡ , ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಶಶಿಧರ ಗುಂಪಕಲ್ಲು, ಆಶಾ ಕಾರ್ಯಕರ್ತೆಯಾದ ಶ್ರೀಮತಿ ಹರಿಣಾಕ್ಷಿ, ಶಾಲಾ ಮುಖ್ಯ ಶಿಕ್ಷಕ ಶೀನಪ್ಪಗೌಡರವರು ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಶ್ರೀಮತಿ ಸುಜಾತಾ ರವರು ಸ್ವಾಗತಿಸಿ, ನಿಶಾಂತ್ ಕುಮಾರ್ ರವರು ಧನ್ಯಾವಾದಗೈದ ಕಾರ್ಯಕ್ರಮವನ್ನು ಶ್ರೀಮತಿ ಪುಷ್ಪಲತಾ ರವರು ನಿರೂಪಿಸಿದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯ ನೇತೃತ್ವದಲ್ಲಿ ಮುಖ್ಯ ಮಂತ್ರಿ ಪದಕ ವಿಜೇತ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ರವರಿಗೆ ಸನ್ಮಾನ

Suddi Udaya

ಶಿಶಿಲ: ದೇನೋಡಿ ಪರಿಸರದ ತೋಟಗಳಿಗೆ ನುಗ್ಗಿದ ಕಾಡನೆಗಳ ಹಿಂಡು

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಜೂ.12 ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya

ಸೆ.22ರಿಂದ ಅ.1: ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮದಲ್ಲಿ ಶುಶ್ರೂಷೆಯ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆ

Suddi Udaya
error: Content is protected !!