24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿಹಿಂದುಳಿದ ವರ್ಗದ ಹಿಂದೂ ಸಮುದಾಯದ ಮಹಿಳೆಯರನ್ನು ಅಸಹ್ಯ
ವಾಗಿ ಅವಹೇಳನಕಾರಿಯಾಗಿ ಹೀಯಾಳಿಸಿದ ಅರಣ್ಯಾಧಿಕಾರಿ ಸಂಜೀವ್ ಪೂಜಾರಿ ಕಾಣಿಯೂರು ರವರ ವರ್ತನೆ ಖಂಡನಿಯವೆಂದು ಬೆಳ್ತಂಗಡಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಸುಧೀರ್ ಆರ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸರಕಾರದ ಅರಣ್ಯ ಇಲಾಖೆಯಲ್ಲಿ 28 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸಂಜೀವ ಪೂಜಾರಿ ಅವರ ಈ ಹೇಳಿಕೆ ಗಮನಿಸಿದಾಗ ಅವರ ಮನಸ್ಥಿತಿಯೂ ಅವರ ವೃತ್ತಿ ಜೀವನದ ಪಾವಿತ್ರತೆಯನ್ನು ಉಲ್ಲಂಘಿಸಿದ್ದಾರೆ ಎಂಬುದನ್ನು ಸೂಚಿಸಿತ್ತದೆ. ಸಮಾಜದಲ್ಲಿ ಹೆಣ್ಣನ್ನು ದೇವತೆಯಾಗಿ ಗೌರವಿಸಿ ಪೂಜಿಸುವ ಸಂಸ್ಕೃತಿ ನಮ್ಮದು. ನವರಾತ್ರಿ ಶುಭ ಗಳಿಗೆಯಲ್ಲಿ ಸಂಜೀವ ಪೂಜಾರಿಯವರ ಬಾಯಲ್ಲಿ ಇಂತಹ ಅಸಹ್ಯ ನುಡಿಮುತ್ತುಗಳು ಉದುರಬಾರದಿತ್ತು, ಅವರು ಇಡೀ ಹಿಂದೂ ಸಮಾಜದ ಸಾರ್ವತ್ರಿಕ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು.

ಚುನಾವಣೆಯ ಸಂದರ್ಭದಲ್ಲಿ ಕ್ಷುಲ್ಲಕ ಜಾತಿ ರಾಜಕಾರಣ ಮಾಡುವ ಜಾತಿ ಸಂಘಗಳು ಇಂತಹ ಗಂಭೀರ ವಿಚಾರದಲ್ಲಿ ಮೌನಕ್ಕೆ ಶರಣಾಗಿರುವುದು ಬಗ್ಗೆ ತೀವ್ರ ಬೇಸರ ಹೊರ ಹಾಕಿದ್ದಾರೆ.

Related posts

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ

Suddi Udaya

ಸುಯ೯ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

Suddi Udaya

ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ 3 ರ್‍ಯಾಂಕ್‌ಗಳು

Suddi Udaya

ನಾಳ ಶ್ರೀ ಕ್ಷೇತ್ರದಲ್ಲಿ ತೆನೆ ವಿತರಣೆ ಹಾಗೂ ಹೊಸ ಅಕ್ಕಿ ಊಟ

Suddi Udaya

ನಿಡ್ಲೆಯಲ್ಲಿ ಕಾಂಗ್ರೆಸ್ ಬೂತ್ ಸಮಿತಿ ಸಭೆ

Suddi Udaya
error: Content is protected !!