23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿಹಿಂದುಳಿದ ವರ್ಗದ ಹಿಂದೂ ಸಮುದಾಯದ ಮಹಿಳೆಯರನ್ನು ಅಸಹ್ಯ
ವಾಗಿ ಅವಹೇಳನಕಾರಿಯಾಗಿ ಹೀಯಾಳಿಸಿದ ಅರಣ್ಯಾಧಿಕಾರಿ ಸಂಜೀವ್ ಪೂಜಾರಿ ಕಾಣಿಯೂರು ರವರ ವರ್ತನೆ ಖಂಡನಿಯವೆಂದು ಬೆಳ್ತಂಗಡಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಸುಧೀರ್ ಆರ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸರಕಾರದ ಅರಣ್ಯ ಇಲಾಖೆಯಲ್ಲಿ 28 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸಂಜೀವ ಪೂಜಾರಿ ಅವರ ಈ ಹೇಳಿಕೆ ಗಮನಿಸಿದಾಗ ಅವರ ಮನಸ್ಥಿತಿಯೂ ಅವರ ವೃತ್ತಿ ಜೀವನದ ಪಾವಿತ್ರತೆಯನ್ನು ಉಲ್ಲಂಘಿಸಿದ್ದಾರೆ ಎಂಬುದನ್ನು ಸೂಚಿಸಿತ್ತದೆ. ಸಮಾಜದಲ್ಲಿ ಹೆಣ್ಣನ್ನು ದೇವತೆಯಾಗಿ ಗೌರವಿಸಿ ಪೂಜಿಸುವ ಸಂಸ್ಕೃತಿ ನಮ್ಮದು. ನವರಾತ್ರಿ ಶುಭ ಗಳಿಗೆಯಲ್ಲಿ ಸಂಜೀವ ಪೂಜಾರಿಯವರ ಬಾಯಲ್ಲಿ ಇಂತಹ ಅಸಹ್ಯ ನುಡಿಮುತ್ತುಗಳು ಉದುರಬಾರದಿತ್ತು, ಅವರು ಇಡೀ ಹಿಂದೂ ಸಮಾಜದ ಸಾರ್ವತ್ರಿಕ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು.

ಚುನಾವಣೆಯ ಸಂದರ್ಭದಲ್ಲಿ ಕ್ಷುಲ್ಲಕ ಜಾತಿ ರಾಜಕಾರಣ ಮಾಡುವ ಜಾತಿ ಸಂಘಗಳು ಇಂತಹ ಗಂಭೀರ ವಿಚಾರದಲ್ಲಿ ಮೌನಕ್ಕೆ ಶರಣಾಗಿರುವುದು ಬಗ್ಗೆ ತೀವ್ರ ಬೇಸರ ಹೊರ ಹಾಕಿದ್ದಾರೆ.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಮಂಚಿತ್ತಾಯ ಅಸೌಖ್ಯದಿಂದ ನಿಧನ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿಂಜೆ ರವರು ಸೌತಡ್ಕ ದೇವಸ್ಥಾನಕ್ಕೆ ಭೇಟಿ, ವಿಶೇಷ ಪೂಜೆ

Suddi Udaya

ಗ್ರಾ.ಪಂ. ನೌಕರರ ಜಿಲ್ಲಾ ಮಟ್ಟದ ಕುಂದು ಕೊರತೆ ಅದಾಲತ್ ಸಭೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ

Suddi Udaya

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧನುಶ್ರೀ ಎಸ್ ಕುಲಾಲ್ ತೃತೀಯ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya
error: Content is protected !!