July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮ ಪೂಜ್ಯ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಶ್ರೀ ಕ್ಷೇತ್ರದಲ್ಲಿ ಅ.24ರಂದು ಜರುಗಿತು. ಬೆಳಿಗ್ಗೆ ಊರ, ಪರವೂರ ಗಣ್ಯರು, ಕ್ಷೇತ್ರದ ಮುಖ್ಯಸ್ಥರು, ನೌಕರರು, ಸಂಘ, ಸಂಸ್ಥೆಯವರು, ಧಮ೯ಸ್ಥಳ ಗ್ರಾಮಸ್ಥರು ಕ್ಷೇತ್ರಕ್ಕೆ ಆಗಮಿಸಿ ಹೆಗ್ಗಡೆಯವರಿಗೆ ಗೌರವ ನಮನ ಸಲ್ಲಿಸಿದರು.


ಸಂಜೆ ಮಹೋತ್ಸವ ಸಭಾಭವನದಲ್ಲಿ ಸಮಾರಂಭ ನಡೆಯಿತು. ಶ್ರೀ ಜೈನಮಠ, ಮೂಡಬಿದಿರೆ ಪರಮಪೂಜ್ಯ ಜಗದ್ಗುರು ಡಾ॥ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರು ಆಶೀರ್ವಚನ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಲೋಕಸಭಾ ಕ್ಷೇತ್ರ ಬೆಂಗಳೂರು ಗ್ರಾಮಾಂತರ ಸಂಸದರು ಡಾ.ಸಿ.ಎನ್. ಮಂಜುನಾಥ್, ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯ ಪ್ರತಾಪ್‌ ಸಿಂಹ ನಾಯಕ್ ಉಪಸ್ಥಿತರಿದ್ದರು.

ಈ ವೇಳೆ ಅಭಿಮಾನಿಗಳಿಂದ ಡಾ| ಹೆಗ್ಗಡೆಯವರಿಗೆ ಗೌರರ್ವಾಪಣೆಯು ನಡೆಯಿತು.

ಕ್ಷೇತ್ರದ 30 ಹಿರಿಯ ನೌಕರರನ್ನು ಸನ್ಮಾನಿಸಲಾಯಿತು. ಛದ್ಮವೇಷ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಸಮಾರಂಭದಲ್ಲಿ ಮೂಡಬಿದಿರೆ ಶ್ರೀ ಜೈನಮಠ ಪರಮಪೂಜ್ಯ ಜಗದ್ಗುರು ಡಾ|| ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರು, ಸಂಸದರು ಡಾ.ಸಿ.ಎನ್. ಮಂಜುನಾಥ್, ವಿಧಾನಪರಿಷತ್ ಸದಸ್ಯ ಪ್ರತಾಪ್‌ ಸಿಂಹ ನಾಯಕ್, ಗೌರವಿಸಲಾಯಿತು. ವೇದಿಕೆಯಲ್ಲಿ ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ, ಡಿ.ಸುರೇಂದ್ರ ಕುಮಾರ್, ಡಿ.ಹಷೇ೯ಂದ್ರ ಕುಮಾರ್ ಉಪಸ್ಥಿತರಿದ್ದರು.


ಧರ್ಮಸ್ಥಳ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಜಿರೆ ಎಸ್.ಡಿ.ಎಂ.ಇ. ಸೊಸೈಟಿ ಕಾರ್ಯದರ್ಶಿ ಡಾ.ಎಸ್. ಸತೀಶ್ಚಂದ್ರ ಸ್ವಾಗತಿಸಿದರು, ಅನ್ನಪೂರ್ಣ ಛತ್ರ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು,, ಪಟ್ಟಾಭಿಷೇಕ ವರ್ಧಂತ್ಯುತ್ಸವದ ಸಂಚಾಲಕರು ಲಕ್ಷ್ಮೀನಾರಾಯಣ ರಾವ್,, ವಂದಿಸಿದರು.

Related posts

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ

Suddi Udaya

ಅಭಿವೃದ್ಧಿ ಅಧಿಕಾರಿಗಳಾದ ಸಫಾನ, ಸುಮ ವರ್ಗಾವಣೆ: ಧರ್ಮಸ್ಥಳ ಪಿಡಿಓ ಆಗಿ ನಾಗೇಶ್, ಸುಲ್ಕೇರಿಗೆ ಗೌರಿಶಂಕರ್, ಪಟ್ರಮೆಗೆ ಹೊನ್ನಮ್ಮ, ಮೇಲಂತಬೆಟ್ಟುಗೆ ಜಗದೀಶ್ ನೇಮಕ

Suddi Udaya

ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಕಳೆದುಕೊಂಡಿದ್ದ ಚಿನ್ನವನ್ನು ಮರಳಿ ದಂಪತಿಗಳಿಗೆ ಹಸ್ತಾಂತರಿಸಿದ ಲಾಡ್ಜ್ ಮಾಲೀಕ

Suddi Udaya

ಉಜಿರೆ: ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!