25.8 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

ತಣ್ಣೀರುಪಂತ ಗ್ರಾಮ ಪಂಚಾಯತಿಯ ಸಭಾಭವನದಲ್ಲಿ ತಾಲೂಕು ಪಂಚಾಯತ್ ಬೆಳ್ತಂಗಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ ನಡೆಯಿತು.

ಈ ಕಾರ್ಯಕ್ರಮಕ್ಕೆ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಯವರಾದ ಭವಾನಿ ಶಂಕರ್ ರವರು ಭೇಟಿ ನೀಡಿ, ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ನರೇಗಾ ಯೋಜನೆ ಸಹಕಾರಿಯಾಗಲಿದೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳಿ ಎಂದರು.

ಕಾರ್ಯಕ್ರಮದಲ್ಲಿ ತಣ್ಣೀರುಪಂತ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರವಣ್ ಕುಮಾರ್, ಗ್ರಾ. ಪಂ ಕಣಿಯೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗೀತಾ, ಕಳಿಯ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ತೆಕ್ಕಾರು ಮತ್ತು ಇಳಂತಿಲ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಮಯ್ಯ,ತಣ್ಣೀರುಪಂತ ಗ್ರಾ. ಪಂ ಕಾರ್ಯದರ್ಶಿ ಆನಂದ, ಮಚ್ಚಿನ ಗ್ರಾ. ಪ ಕಾರ್ಯದರ್ಶಿ ಸಂಜೀವ, ಬಾರ್ಯ ಗ್ರಾ. ಪಂ ಕಾರ್ಯದರ್ಶಿ ಶ್ರೀಮತಿ ಶೀಲಾ, ಇಳಂತಿಲ ಗ್ರಾ. ಪಂ ಕಾರ್ಯದರ್ಶಿ ಶ್ರೀಮತಿ ವಿಜಯ,ತಾಂತ್ರಿಕ ಸಹಾಯಕ ಅಭಿಯಂತರರಾದ ಶರಣ್ ರೖ, ತಾಲೂಕು ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಬಿ. ಎಫ್. ಟಿಗಳಾದ , ಪ್ರವೀಣ್, ಕಳಿಯ, ಕಣಿಯೂರು, ತಣ್ಣೀರುಪಂತ, ಮಚ್ಚಿನ, ಬಾರ್ಯ, ತೆಕ್ಕಾರು, ಇಳಂತಿಲ ಗ್ರಾಮ ಪಂಚಾಯತಿಯ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು,ಎಮ್.ಬಿ. ಕೆ, ಎಲ್. ಸಿ. ಆರ್. ಪಿ, ಕೃಷಿ ಸಖಿ, ಪಶು ಸಖಿ, ಉಜಿರೆ ಎಸ್. ಡಿ. ಎಮ್ ಸ್ನಾತಕೋತ್ತರ ಕಾಲೇಜಿನ ಸಮಾಜ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು, ಗ್ರಾ. ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಜಯಾನಂದ ವಲಯ ಮೇಲ್ವಿಚಾರಕರು ಎನ್. ಆರ್. ಎಲ್. ಎಮ್ ತಾಲೂಕು ನಿರ್ವಹಣಾ ಘಟಕ ಇವರು ಸ್ವಾಗತಿಸಿ, ಕೆ.ಸ್ವಸ್ತಿಕ್ ಜೖನ್ ವಲಯ ಮೇಲ್ವಿಚಾರಕರು ಎನ್. ಆರ್. ಎಲ್. ಎಮ್ ತಾಲೂಕು ನಿರ್ವಹಣಾ ಘಟಕ ಇವರು ನಿರೂಪಿಸಿದರು.

Related posts

ಶಿಬಾಜೆ; ವಲಯ ಶಿವಳ್ಳಿ ಬಾಂಧವರ ವತಿಯಿಂದ ಜಯರಾಮ ನೆಲ್ಲಿತ್ತಾಯ ದಂಪತಿಗಳಿಗೆ ಅಭಿನಂದನಾ ಕಾರ್ಯಕ್ರಮ ಜಯರಾಮ ನೆಲ್ಲಿತ್ತಾಯ ಸಮಾಜದ ಆಸ್ತಿ: ರಾಜಪ್ರಸಾದ್ ಪೊಲ್ನಾಯ

Suddi Udaya

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

Suddi Udaya

ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪೆರ್ಲ -ಬೈಪಾಡಿಯಲ್ಲಿ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ಯೋಜನೆಯಿಂದ ನೆರವು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರ

Suddi Udaya

ಚಿನ್ನಯ್ಯ ಪರ ವಕೀಲರುಗಳ ವಿರುದ್ಧ ಎಸ್.ಐ.ಟಿಗೆ ಧರ್ಮಸ್ಥಳ ಗ್ರಾಮಸ್ಥರಿಂದ ದೂರು:

Suddi Udaya
error: Content is protected !!