July 23, 2026
Uncategorized

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

ತಣ್ಣೀರುಪಂತ ಗ್ರಾಮ ಪಂಚಾಯತಿಯ ಸಭಾಭವನದಲ್ಲಿ ತಾಲೂಕು ಪಂಚಾಯತ್ ಬೆಳ್ತಂಗಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ ನಡೆಯಿತು.

ಈ ಕಾರ್ಯಕ್ರಮಕ್ಕೆ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಯವರಾದ ಭವಾನಿ ಶಂಕರ್ ರವರು ಭೇಟಿ ನೀಡಿ, ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ನರೇಗಾ ಯೋಜನೆ ಸಹಕಾರಿಯಾಗಲಿದೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳಿ ಎಂದರು.

ಕಾರ್ಯಕ್ರಮದಲ್ಲಿ ತಣ್ಣೀರುಪಂತ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರವಣ್ ಕುಮಾರ್, ಗ್ರಾ. ಪಂ ಕಣಿಯೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗೀತಾ, ಕಳಿಯ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ತೆಕ್ಕಾರು ಮತ್ತು ಇಳಂತಿಲ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಮಯ್ಯ,ತಣ್ಣೀರುಪಂತ ಗ್ರಾ. ಪಂ ಕಾರ್ಯದರ್ಶಿ ಆನಂದ, ಮಚ್ಚಿನ ಗ್ರಾ. ಪ ಕಾರ್ಯದರ್ಶಿ ಸಂಜೀವ, ಬಾರ್ಯ ಗ್ರಾ. ಪಂ ಕಾರ್ಯದರ್ಶಿ ಶ್ರೀಮತಿ ಶೀಲಾ, ಇಳಂತಿಲ ಗ್ರಾ. ಪಂ ಕಾರ್ಯದರ್ಶಿ ಶ್ರೀಮತಿ ವಿಜಯ,ತಾಂತ್ರಿಕ ಸಹಾಯಕ ಅಭಿಯಂತರರಾದ ಶರಣ್ ರೖ, ತಾಲೂಕು ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಬಿ. ಎಫ್. ಟಿಗಳಾದ , ಪ್ರವೀಣ್, ಕಳಿಯ, ಕಣಿಯೂರು, ತಣ್ಣೀರುಪಂತ, ಮಚ್ಚಿನ, ಬಾರ್ಯ, ತೆಕ್ಕಾರು, ಇಳಂತಿಲ ಗ್ರಾಮ ಪಂಚಾಯತಿಯ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು,ಎಮ್.ಬಿ. ಕೆ, ಎಲ್. ಸಿ. ಆರ್. ಪಿ, ಕೃಷಿ ಸಖಿ, ಪಶು ಸಖಿ, ಉಜಿರೆ ಎಸ್. ಡಿ. ಎಮ್ ಸ್ನಾತಕೋತ್ತರ ಕಾಲೇಜಿನ ಸಮಾಜ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು, ಗ್ರಾ. ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಜಯಾನಂದ ವಲಯ ಮೇಲ್ವಿಚಾರಕರು ಎನ್. ಆರ್. ಎಲ್. ಎಮ್ ತಾಲೂಕು ನಿರ್ವಹಣಾ ಘಟಕ ಇವರು ಸ್ವಾಗತಿಸಿ, ಕೆ.ಸ್ವಸ್ತಿಕ್ ಜೖನ್ ವಲಯ ಮೇಲ್ವಿಚಾರಕರು ಎನ್. ಆರ್. ಎಲ್. ಎಮ್ ತಾಲೂಕು ನಿರ್ವಹಣಾ ಘಟಕ ಇವರು ನಿರೂಪಿಸಿದರು.

Related posts

ಎಂಎಲ್ಸಿ ಪ್ರತಾಪಸಿಂಹ ನಾಯಕ್ ಶಿಫಾರಸ್ಸಿನನ್ವಯ ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ. 1.22ಲಕ್ಷ ಮಂಜೂರು

Suddi Udaya

ಲೋಕಸಭಾ ಚುನಾವಣೆ, ಹಲವು ಮತಗಟ್ಟೆಗಳಿಗೆ ಸಂಪತ್ ಬಿ ಸುವರ್ಣ ಭೇಟಿ

Suddi Udaya

ಸೆ .13: ಶ್ರವಣಬೆಳಗೊಳದ ಮಹಾಸ್ವಾಮೀಜಿ ಬೆಳ್ತಂಗಡಿ ಪುರ ಪ್ರವೇಶ

Suddi Udaya

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ಯೋಧರಿಗೆ ದೈವಬಲದ ರಕ್ಷಣೆಗಾಗಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ

Suddi Udaya

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಿಶೋರ್ ಕುಮಾರ್ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು

Suddi Udaya
error: Content is protected !!