September 6, 2026
Uncategorized

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ನಿಡ್ಲೆ, ಪೆರ್ಲ, ಕೊಕ್ಕಡ ವಲಯ ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭ ಕಾರ್ಯಕ್ರಮವು ಅ.22 ರಂದು ನೆರವೇರಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಿವೃತ್ತ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಯಾಗಿ ಸೋಮಶೇಖರ್ ಮಾತನಾಡಿ ಕ್ರೀಡಾಕೂಟದಿಂದ ವಿದ್ಯಾರ್ಥಿಗಳ ಮಾನಸಿಕ ಸ್ಥೈರ್ಯ ದ್ವಿಗುಣವಾಗುತ್ತದೆ, ಕ್ರೀಡೆಯಿಂದ ಮಗುವಿನ ಶಾರೀರಿಕ ಬೆಳವಣಿಗೆಯಾಗುತ್ತದೆ ಈ ಕ್ರೀಡಾಕೂಟಕ್ಕೆ ಊರಿನ ಕ್ರೀಡಾಭಿಮಾನಿಗಳ ಪ್ರೋತ್ಸಾಹವನ್ನು ಮೆಚ್ಚಿ ಅಭಿನಂದಿಸಿದರು.

ವೇದಿಕೆಯಲ್ಲಿ ಸ್ಥಳೀಯರಾದ ಜೈನ್, ನಿವೃತ್ತ ಮುಖ್ಯ ಶಿಕ್ಷಕ ಜಿ ಶ್ರೀಧರನ್ ನಾಯರ್, ಪುದುವೆಟ್ಟು ಗ್ರಾಮ ಪಂಚಾಯಿತಿನ ನಿಕಟ ಪೂರ್ವ ಅಧ್ಯಕ್ಷ ಯಶವಂತ ಗೌಡ, ವಲಯ ಸಂಘಟಕರಾದ ವಿಲ್ಫ್ರೆಡ್ ಪಿಂಟೊ ,ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್, ಸಾರ್ವಜನಿಕ ಅಷ್ಟಮಿ ಸಮಿತಿಯ ಅಧ್ಯಕ್ಷ ದಿವಾಕರ ಗೌಡ , ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಶಶಿಧರ ಗುಂಪಕಲ್ಲು, ಆಶಾ ಕಾರ್ಯಕರ್ತೆಯಾದ ಶ್ರೀಮತಿ ಹರಿಣಾಕ್ಷಿ, ಶಾಲಾ ಮುಖ್ಯ ಶಿಕ್ಷಕ ಶೀನಪ್ಪಗೌಡರವರು ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಶ್ರೀಮತಿ ಸುಜಾತಾ ರವರು ಸ್ವಾಗತಿಸಿ, ನಿಶಾಂತ್ ಕುಮಾರ್ ರವರು ಧನ್ಯಾವಾದಗೈದ ಕಾರ್ಯಕ್ರಮವನ್ನು ಶ್ರೀಮತಿ ಪುಷ್ಪಲತಾ ರವರು ನಿರೂಪಿಸಿದರು.

Related posts

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಮಾ.10 : ಗುರುವಾಯನಕೆರೆ ಶಾರದಾ ನಗರ ಗೆಳೆಯರ ಬಳಗದ ವೇದಿಕೆ ಬಳಿ ಹಿರಿಯಡಕ ಮೇಳದವರಿಂದ’ಅಪ್ಪೆ ಮಾಯಂದಾಲ್’ತುಳು ಯಕ್ಷಗಾನ ಬಯಲಾಟ

Suddi Udaya

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರಿಗೆ ಆಮಂತ್ರಣ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್ ಸ್ಥಾಪನ ದಿನಾಚರಣೆ

Suddi Udaya
error: Content is protected !!