25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಆಶಾಕೇಂದ್ರವಾಗಲಿದೆ ಬೈಂದೂರಿನ ಹೇನಬೇರು ಶಾಲೆ

ಬೈಂದೂರು: ಸೇವಾಭಾರತಿ ಕನ್ಯಾಡಿಯು ಕಳೆದ 6 ಜಿಲ್ಲೆಗಳ ವ್ಯಾಪ್ತಿಗಳಲ್ಲಿ 700ಕ್ಕೂ ಹೆಚ್ಚು ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಪುನಶ್ಚೇತನವನ್ನು ನೀಡುತ್ತಾ ಬಂದಿದ್ದು. ಇದರಲ್ಲಿ 100 ಕ್ಕೂ ಹೆಚ್ಚು ಮಂದಿ ಒತ್ತಡಗಾಯದಿಂದ ಬಳಲುತ್ತಿದ್ದು ಇದರ ನಿರ್ವಹಣೆಯನ್ನು ಮಾಡುವುದು ಅತಿ ಕಷ್ಟ. ಒತ್ತಡ ಗಾಯಗಳಿರುವಂತ ವ್ಯಕ್ತಿಗಳು ಪುನಶ್ಚೇತನವನ್ನು ಪಡೆದುಕೊಳ್ಳುವುದು ಸಹ ಕಷ್ಟದ ಸಂಗತಿ. ಈ ನಿಟ್ಟಿನಲ್ಲಿ ಬೈಂದೂರಿನ ಪಡುವರಿ ಗ್ರಾಮದಲ್ಲಿರುವ ಹೇನಬೇರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯು 6 ವರ್ಷಗಳಿಂದ ವಿದ್ಯಾರ್ಥಿಗಳ ದಾಖಲಾತಿಯ ಕೊರತೆಯಿಂದ ಮುಚ್ಚಿದ್ದು. ಈ ಶಾಲೆಯನ್ನು ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಒತ್ತಡಗಾಯ ನಿರ್ವಹಣೆ ಮತ್ತು ಪುನಶ್ಚೇತನ ಕೇಂದ್ರವನ್ನಾಗಿ ಮಾಡುವ ಸಲುವಾಗಿ ಶಿಕ್ಷಣ ಇಲಾಖೆ ಮತ್ತು ಕನ್ಯಾಡಿಯ ಸೇವಾಭಾರತಿ ಸಂಸ್ಥೆಯ ನಡುವೆ ಒಡಂಬಡಿಕೆ ವಿನಿಮಯ ನಡೆಯಿತು. ಸಮೃದ್ಧ ಬೈಂದೂರು ಪರಿಕಲ್ಪನೆಯ ಸೇವಾ ಸೇತು ಯೋಜನೆಯಡಿಯಲ್ಲಿ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ ಆದ ಈ ಕಾರ್ಯಕ್ರಮದಲ್ಲಿ ಒಡಂಬಡಿಕೆ ಪತ್ರವನ್ನು ಬಿಇಒ ಆಫೀಸ್ ನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ ಮತ್ತು ಸೇವಾಧಾಮ ಸಂಸ್ಥಾಪಕರಾದ ಕೆ ವಿನಾಯಕ ರಾವ್ ಒಡಂಬಡಿಕೆ ಪತ್ರವನ್ನು ವಿನಿಮಯ ಮಾಡಿಕೊಂಡರು. ಈ ಸಂದರ್ಭದಲ್ಲಿ ಬೈಂದೂರಿನ ಸಮೃದ್ಧ ಜನ ಸೇವಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಸುರೇಶ್ ಶೆಟ್ಟಿ , ಉದ್ಯಮಿ ಪಾಂಡುರಂಗ ಪಡಿಯಾರ್, ಸಾಮಾಜಿಕ ಕಾರ್ಯಕರ್ತ ದಿನಕರ್, ಕರ್ನಾಟಕ ಪ್ರಾಥಮಿಕ ಶಿಕ್ಷಕ ಸಂಘ ಜಿಲ್ಲಾ ಗೌರವಾಧ್ಯಕ್ಷ ವಿಶ್ವನಾಥ್ ಪೂಜಾರಿ, ಹಾಗೂ ಸೇವಾಭಾರತಿಯ ಹಿರಿಯ ಪ್ರಬಂಧಕರಾದ ಚರಣ್ ಕುಮಾರ್ ಎಂ ಉಪಸ್ಥಿತರಿದ್ದರು.

ಮುಂದಿನ ತಿಂಗಳುಗಳಲ್ಲಿ ಈ ಯೋಜನೆಯು ಕಾರ್ಯಾಚರಿಸಲ್ಪಡುತ್ತದೆ ಮತ್ತು ಸುತ್ತಮುತ್ತಲ ಜಿಲ್ಲೆಯಲ್ಲಿ ಒತ್ತಡ ಗಾಯಗಳಿರುವಂತಹ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಈ ಕೇಂದ್ರ ವರದಾನವಾಗಲಿದೆ ಹಾಗೂ ಅವರ ಜೀವನ ಕ್ರಮ ಸುಗಮವಾಗಲಿದೆ.

Related posts

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮಹಿಳೆ ಸಾವು

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಮೇ.13: ಸುರತ್ಕಲ್ ಎನ್‌ಐಟಿಕೆಯಲ್ಲಿ ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ: ಸ್ಟ್ರಾಂಗ್ ರೂಮ್‌ಗೆ ಕೇಂದ್ರೀಯ ಅರೆಸೇನಾ ಪಡೆಯಿಂದ ಬಿಗು ಭದ್ರತೆ

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಶಹೀರ್ ಅನಸ್ ರವರಿಗೆ ಚಿನ್ನದ ಪದಕ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya
error: Content is protected !!